3:57 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Mahaveera Jayanthi | ಭಗವಾನ್ ಮಹಾವೀರರ ಸಂದೇಶ ವಿಶ್ವಕ್ಕೆ ಇಂದು ಪ್ರಸ್ತುತ : ಸ್ಪೀಕರ್ ಖಾದರ್

11/04/2025, 11:04

ಮಂಗಳೂರು(reporterkarnataka.com): ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾವೀರರ ಸಂದೇಶಗಳನ್ನು ಯಾವುದೇ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತಗೊಳಿಸಬಾರದು. ತಾಳ್ಮೆ ಮತ್ತು ಪ್ರೀತಿಯಿಂದ ಸಮಾಜವನ್ನು ಕಟ್ಟಬೇಕೆಂಬ ಅವರ ನೀತಿಯು ಮಾದರಿಯಾಗಿದೆ. ಮಹಾಪುರುಷರ ಜಯಂತಿ ಕಾರ್ಯಕ್ರಮ ಯಾವುದೇ ನಿರ್ದಿಷ್ಟ ಜಾತಿ, ಪಂಗಡಗಳಿಗೆ ಸೀಮಿತವಾಗಬಾರದು. ಎಲ್ಲ ವರ್ಗದ ಜನರು ಭಾಗವಹಿಸಿ ಆಚರಿಸಿದರೆ ಮಹಾಪುರುಷರ ಸಂದೇಶವು ಸರ್ವರಿಗೂ ತಲುಪಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.
ತಮ್ಮ ಜೀವನವನ್ನೇ ಜನರಿಗೆ ಮಾದರಿಯಾಗಿಸಿ, ಅವರ ಹೃದಯ ಗೆದ್ದ ವ್ಯಕ್ತಿತ್ವ ಮಹಾವೀರರದ್ದಾಗಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸತ್ಯ ಮತ್ತು ಅಹಿಂಸೆ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬುದನ್ನು ಮಹಾವೀರರು ತೋರಿಸಿದ್ದಾರೆ ಎಂದು ಹೇಳಿದರು.
ಸಮಾರಂಭದಲ್ಲಿ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜೈನ್ ಸೊಸೈಟಿ ಗೌರವಾಧ್ಯಕ್ಷ ಸುರೇಶ್ ಬಲ್ಲಾಲ್, ಕಾರ್ಯದರ್ಶಿ ಸಚಿನ್ ಕುಮಾರ್, ಜೈನ್ ಮಿಲನ್ ಅಧ್ಯಕ್ಷ ರತ್ನಾಕರ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.
ಜೈನ್ ಸೊಸೈಟಿ ಅಧ್ಯಕ್ಷ ಪುಷ್ಪರಾಜ ಜೈನ್ ಸ್ವಾಗತಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ವಂದಿಸಿದರು. ಸುಕುಮಾರ ಬಲ್ಲಾಲ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು