9:08 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Mahaveera Jayanthi | ಭಗವಾನ್ ಮಹಾವೀರರ ಸಂದೇಶ ವಿಶ್ವಕ್ಕೆ ಇಂದು ಪ್ರಸ್ತುತ : ಸ್ಪೀಕರ್ ಖಾದರ್

11/04/2025, 11:04

ಮಂಗಳೂರು(reporterkarnataka.com): ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾವೀರರ ಸಂದೇಶಗಳನ್ನು ಯಾವುದೇ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತಗೊಳಿಸಬಾರದು. ತಾಳ್ಮೆ ಮತ್ತು ಪ್ರೀತಿಯಿಂದ ಸಮಾಜವನ್ನು ಕಟ್ಟಬೇಕೆಂಬ ಅವರ ನೀತಿಯು ಮಾದರಿಯಾಗಿದೆ. ಮಹಾಪುರುಷರ ಜಯಂತಿ ಕಾರ್ಯಕ್ರಮ ಯಾವುದೇ ನಿರ್ದಿಷ್ಟ ಜಾತಿ, ಪಂಗಡಗಳಿಗೆ ಸೀಮಿತವಾಗಬಾರದು. ಎಲ್ಲ ವರ್ಗದ ಜನರು ಭಾಗವಹಿಸಿ ಆಚರಿಸಿದರೆ ಮಹಾಪುರುಷರ ಸಂದೇಶವು ಸರ್ವರಿಗೂ ತಲುಪಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.
ತಮ್ಮ ಜೀವನವನ್ನೇ ಜನರಿಗೆ ಮಾದರಿಯಾಗಿಸಿ, ಅವರ ಹೃದಯ ಗೆದ್ದ ವ್ಯಕ್ತಿತ್ವ ಮಹಾವೀರರದ್ದಾಗಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸತ್ಯ ಮತ್ತು ಅಹಿಂಸೆ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬುದನ್ನು ಮಹಾವೀರರು ತೋರಿಸಿದ್ದಾರೆ ಎಂದು ಹೇಳಿದರು.
ಸಮಾರಂಭದಲ್ಲಿ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜೈನ್ ಸೊಸೈಟಿ ಗೌರವಾಧ್ಯಕ್ಷ ಸುರೇಶ್ ಬಲ್ಲಾಲ್, ಕಾರ್ಯದರ್ಶಿ ಸಚಿನ್ ಕುಮಾರ್, ಜೈನ್ ಮಿಲನ್ ಅಧ್ಯಕ್ಷ ರತ್ನಾಕರ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.
ಜೈನ್ ಸೊಸೈಟಿ ಅಧ್ಯಕ್ಷ ಪುಷ್ಪರಾಜ ಜೈನ್ ಸ್ವಾಗತಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ವಂದಿಸಿದರು. ಸುಕುಮಾರ ಬಲ್ಲಾಲ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು