8:56 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮಹಿಳೆಗೆ ಅವಮಾನ: ಬಿಜೆಪಿ ಮುಖಂಡನ ಫ್ಲಾಟ್‌ನ ಹೊರಗಿನ ಅಕ್ರಮ ಕಟ್ಟಡ ಮೇಲೆ ಬುಲ್ಡೋಜರ್ ಕಾರ್ಯಾಚರಣೆ

08/08/2022, 21:06

ನೋಯ್ಡಾ( reporterkarnataka.com):ಮಹಿಳೆಯೊಬ್ಬರ ಜತೆ ಗಲಾಟೆ ಮಾಡಿ ಅವಾಚ್ಯ ಪದ ಬಳಸಿದ ಬಿಜೆಪಿ ಮುಖಂಡರೊಬ್ಬರ ನೋಯ್ಡಾ ಫ್ಲಾಟ್‌ನ ಹೊರಗಿನ ಅಕ್ರಮ ಕಟ್ಟಡಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಕಿತ್ತು ಹಾಕಿದೆ.

ಬಿಜೆಪಿ ಕಿಸಾನ್ ಮೋರ್ಚಾದ ಮುಖಂಡ ಶ್ರೀಕಾಂತ್ ತ್ಯಾಗಿ ಮಹಿಳೆಯೊಂದಿಗೆ ಗಲಾಟೆ ಮಾಡಿದ್ದಲ್ಲದೆ ಕೀಳುಮಟ್ಟದಲ್ಲಿ ವರ್ತಿಸಿದ್ದಾರೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಯೋಗಿ ಸರ್ಕಾರದ ಬುಲ್ಡೋಜರ್ ಕಾರ್ಯರೂಪಕ್ಕಿಳಿದಿದೆ. ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ಸೆಕ್ಟರ್-93Bಯಲ್ಲಿರುವ ತ್ಯಾಗಿಗೆ ಸೇರಿದ ಅಕ್ರಮ ಕಟ್ಟಡವನ್ನು ಅಧಿಕಾರಿಗಳು ಹಾಗೂ ಪೊಲೀಸರು ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಪಡಿಸಿದ ತ್ಯಾಗಿ ಬೆಂಬಲಿಗರನ್ನು ಪೊಲೀಸರು ಚದುರಿಸಿದ್ದಲ್ಲದೆ, ತ್ಯಾಗಿ ವಿರುದ್ಧ ಗ್ಯಾಂಗ್‌ಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕೆಲವು ದಿನಗಳ ಹಿಂದೆ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆ ಮತ್ತು ತ್ಯಾಗಿ ನಡುವೆ ಜಗಳವಾಗಿತ್ತು. ತ್ಯಾಗಿ ಸಸಿಗಳನ್ನು ನೆಡುವ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಮಹಿಳೆ ಪ್ರತಿಭಟಿಸಿದರು. ಈ ವೇಳೆ ತನಗೆ ಏನು ಬೇಕಾದರೂ ಮಾಡುವ ಹಕ್ಕಿದೆ ಎಂದು ವಾದ ಮಾಡುತ್ತಾ ಮಹಿಳೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿತ್ತು.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯ ಎಂದು ಹೇಳಿಕೊಂಡರೂ ಪಕ್ಷ ಹಿಂದೆ ಸರಿಯದೆ ಆತನ ವಿರುದ್ಧ ಕ್ರಮ ಕೈಗೊಂಡಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡ ಶ್ರೀಕಾಂತ್ ತ್ಯಾಗಿ ವಿರುದ್ಧ ಕೈಗೊಂಡ ಕ್ರಮಗಳಿಗಾಗಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ, ಬಿಜೆಪಿಯ ದೆಹಲಿ ವಕ್ತಾರ ಖೇಮಚಂದ್ ಶರ್ಮಾ ಧನ್ಯವಾದ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು