7:41 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಮಹಿಳೆಗೆ ಅವಮಾನ: ಬಿಜೆಪಿ ಮುಖಂಡನ ಫ್ಲಾಟ್‌ನ ಹೊರಗಿನ ಅಕ್ರಮ ಕಟ್ಟಡ ಮೇಲೆ ಬುಲ್ಡೋಜರ್ ಕಾರ್ಯಾಚರಣೆ

08/08/2022, 21:06

ನೋಯ್ಡಾ( reporterkarnataka.com):ಮಹಿಳೆಯೊಬ್ಬರ ಜತೆ ಗಲಾಟೆ ಮಾಡಿ ಅವಾಚ್ಯ ಪದ ಬಳಸಿದ ಬಿಜೆಪಿ ಮುಖಂಡರೊಬ್ಬರ ನೋಯ್ಡಾ ಫ್ಲಾಟ್‌ನ ಹೊರಗಿನ ಅಕ್ರಮ ಕಟ್ಟಡಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಕಿತ್ತು ಹಾಕಿದೆ.

ಬಿಜೆಪಿ ಕಿಸಾನ್ ಮೋರ್ಚಾದ ಮುಖಂಡ ಶ್ರೀಕಾಂತ್ ತ್ಯಾಗಿ ಮಹಿಳೆಯೊಂದಿಗೆ ಗಲಾಟೆ ಮಾಡಿದ್ದಲ್ಲದೆ ಕೀಳುಮಟ್ಟದಲ್ಲಿ ವರ್ತಿಸಿದ್ದಾರೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಯೋಗಿ ಸರ್ಕಾರದ ಬುಲ್ಡೋಜರ್ ಕಾರ್ಯರೂಪಕ್ಕಿಳಿದಿದೆ. ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ಸೆಕ್ಟರ್-93Bಯಲ್ಲಿರುವ ತ್ಯಾಗಿಗೆ ಸೇರಿದ ಅಕ್ರಮ ಕಟ್ಟಡವನ್ನು ಅಧಿಕಾರಿಗಳು ಹಾಗೂ ಪೊಲೀಸರು ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಪಡಿಸಿದ ತ್ಯಾಗಿ ಬೆಂಬಲಿಗರನ್ನು ಪೊಲೀಸರು ಚದುರಿಸಿದ್ದಲ್ಲದೆ, ತ್ಯಾಗಿ ವಿರುದ್ಧ ಗ್ಯಾಂಗ್‌ಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕೆಲವು ದಿನಗಳ ಹಿಂದೆ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆ ಮತ್ತು ತ್ಯಾಗಿ ನಡುವೆ ಜಗಳವಾಗಿತ್ತು. ತ್ಯಾಗಿ ಸಸಿಗಳನ್ನು ನೆಡುವ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಮಹಿಳೆ ಪ್ರತಿಭಟಿಸಿದರು. ಈ ವೇಳೆ ತನಗೆ ಏನು ಬೇಕಾದರೂ ಮಾಡುವ ಹಕ್ಕಿದೆ ಎಂದು ವಾದ ಮಾಡುತ್ತಾ ಮಹಿಳೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿತ್ತು.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯ ಎಂದು ಹೇಳಿಕೊಂಡರೂ ಪಕ್ಷ ಹಿಂದೆ ಸರಿಯದೆ ಆತನ ವಿರುದ್ಧ ಕ್ರಮ ಕೈಗೊಂಡಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡ ಶ್ರೀಕಾಂತ್ ತ್ಯಾಗಿ ವಿರುದ್ಧ ಕೈಗೊಂಡ ಕ್ರಮಗಳಿಗಾಗಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ, ಬಿಜೆಪಿಯ ದೆಹಲಿ ವಕ್ತಾರ ಖೇಮಚಂದ್ ಶರ್ಮಾ ಧನ್ಯವಾದ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು