1:43 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಹಿಳೆಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

18/08/2023, 20:11

ಬೆಂಗಳೂರು(reporterkarnataka.com): ನಗರದ ಹೊರವಲಯದ ಬನ್ನೇರುಘಟ್ಟದ ಬಳಿ
ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೈಗೈದ ಪ್ರಕರಣ ಪ್ರಮುಖ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿದೆ.
ಬನ್ನೇರುಘಟ್ಟದ ಬ್ಯಾಟರಾಯನದೊಡ್ಡಿಯ ಬಳಿ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿ ಪ್ರಕರಣದ ಆರೋಪಿ
ಸೋಮ ಅಲಿಯಾಸ್ ಸೋಮಶೇಖರ್ ಗೆ ನಾರಾಯಣ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಸೆರೆ ಹಿಡಿದಿದ್ದಾರೆ. ಆರೋಪಿಗೆ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬನ್ನೇರುಘಟ್ಟ ಬಳಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ
ಇಂದು ಬೆಳಗ್ಗೆ ಅತ್ಯಾಚಾರ ಪ್ರಕರಣದ ಸ್ಥಳ ಮಹಜರಿಗೆ ಆರೋಪಿಯನ್ನು ಕರೆದೊಯ್ಯುವಾಗ ಮೂತ್ರ ವಿಸರ್ಜನೆ ನೆಪದಲ್ಲಿ ಜೀಪ್ ನಿಂದ ಕೆಳಗಿಳಿದು ಪರಾರಿಯಾಗಲು ಯತ್ನಿಸಿದ್ದ. ಆಗ ಬೆನ್ನಟ್ಟಿದ ಪೇದೆ ಮಾದಪ್ಪ ಮೇಲೆ ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾನೆ. ಡ್ಯಾಗರ್ ಎಸೆದು ಶರಣಾಗುವಂತೆ ಜಿಗಣಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಮತ್ತೆ ಹಲ್ಲೆಗೆ ಮುಂದಾದಾಗ ಮತ್ತೊಂದು ಗುಂಡು ಹಾರಿಸಿದ್ದು ಅದು ಎಡಗಾಲಿಗೆ ತಗುಲಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ
ತಿಳಿಸಿದ್ದಾರೆ.
ಬನ್ನೇರುಘಟ್ಟದ ಬ್ಯಾಟರಾಯನದೊಡ್ಡಿ ನಿವಾಸಿ 38ರ ಹರೆಯದ ಮಹಿಳೆಯ
ಮೇಲೆ ನಿರ್ಜನ ಪ್ರದೇಶದಲ್ಲಿ ಆರೋಪಿ ಸೋಮ ಸೇರಿ ಮೂವರು ಕಾಮುಕರು ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದರು.
ಮಹಿಳೆ ದೇಹದ ಮೇಲೆ ಗಾಯದ ಗುರುತುಗಳು
ಪತ್ತೆಯಾಗಿದ್ದು, ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ
ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಕಂಡುಬಂದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು