7:38 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮಹಿಳೆಯರ ಶೈಕ್ಷಣಿಕ ಹಕ್ಕಿಗೆ ಹೋರಾಡಿದ ಮಹಾ ಮಾತೆ ಸಾವಿತ್ರಿ ಬಾಯಿ ಪುಲೆ: ಶಾಸಕ ಡಾ.ಎನ್.ಟಿ. ಶ್ರೀನಿವಾಸ್

03/01/2024, 22:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳಿಗಾಗಿ, ಸಾವಿತ್ರಿ ಬಾ ಪುಲೆ ಅವರು ನಡೆಸಿದ ಹೋರಾಟ ಇಂದಿಗೂ ಸ್ಪೂರ್ತಿ ಎಂದು ಶಾಸಕ ಡಾ. ಎನ್.ಟಿ.ಶ್ರೀನಿವಾಸ್ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ,ಕೂಡ್ಲಿಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ಸಾವಿತ್ರಿ ಬಾ ಪುಲೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಗಳಿಗಾಗಿ ಹೋರಟ ನಡೆಸಿದ ಸಾವಿತ್ರಿ ಬಾ ಪುಲೆರವರು, ಇಂದಿಗೂ ಎಂದೆಂದಿಗೂ ಸ್ಪೂರ್ತಿದಾಯಕರಾದವರು ಎಂದು ಶಾಸಕರು ನುಡಿದರು.
ಕೂಡ್ಲಿಗಿ ಕ್ಷೇತ್ರದ  ಗುಣಮಟ್ಟದ ಶಿಕ್ಷಣಕ್ಕಾಗಿ,ಪ್ರತಿಯೊಬ್ಬರು ಪತ್ರ ಬರೆಯುವ ಮೂಲಕ  ಅನೇಕ ಸಲಹೆ ಮತ್ತು ಸೂಚನೆ ನೀಡುತ್ತಿರುವುದು ಸಂತಸ  ತಂದಿದೆ ಎಂದರು. 
ಸಾವಿತ್ರಿ ಬಾ ಪುಲೆ ಅವರ ಪ್ರಶಸ್ತಿಗೆ ಪಾತ್ರರಾಗಿರುವ ಗುರು ಮಾತೆಯರು ಹಾಗೂ ಶಿಕ್ಷಕಿಯರು, ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ  ಸೇವೆ ಸಲ್ಲಿಸುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಮತ್ತು ಅವರೆಲ್ಲರಿಗೂ ಶಾಸಕರು ಅಭಿನಂಧನೆಗಳನ್ನು ತಿಳಿಸಿದರು. ನಂತರ ಸಂಘದ  ಬೇಡಿಕೆಗಳನ್ನು ಆಲಿಸಿದ ಶಾಸಕರು, ಮುಂದಿನ ದಿನಮಾನಗಳಲ್ಲಿ ಅವೆಲ್ಲವುಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು. ಗಣನೀಯ ಸೇವೆಸಲ್ಲಿಸಿದ ಹಾಗೂ ನಿವೃತ್ತ ಶಿಕ್ಷಕಿಯರನ್ನು, ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಹಶಿಲ್ದಾರರಾದ ಎಮ್.ರೇಣುಕಮ್ಮ ಸೇರಿದಂತೆ, ತಾಲೂಕು ಮಟ್ಟದ ವಿವಿದ ಇಲಾಖೆಗಳ ಅಧಿಕಾರಿಗಳು ಸಾವಿತ್ರಿ ಬಾಯಿ ಪುಲೆ ಶಿಕ್ಷಕರ ಸಂಘದ ಪದಾಧಿಕಾರಿಗಳು, ಹಾಗೂ ಸದಸ್ಯರು ಶಿಕ್ಷಕ ಶಿಕ್ಷಕಿಯರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು