7:03 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರಕಾರ ವಿಫಲ: ಬೊಮ್ಮಾಯಿ

23/01/2025, 23:13

ಹುಬ್ಬಳ್ಳಿ(reporterkarnataka.com): ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ ಮಹಿಳೆಯರಿಗೆ ಕಾರ್ಯಕ್ರಮ ಮಾಡುತ್ತೇನೆ ಎಂದು ಹೇಳುತ್ತಾರೆ. ಇನ್ನೊಂದು ಕಡೆ ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವಂತಹ ಮೈಕ್ರೊ ಫೈನಾನ್ಸ್ ನಿಯಂತ್ರಣ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಹಿಂದೆ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ಹೆಚ್ಚು ಬಡ್ಡಿ ವಸೂಲಿ ಮಾಡುವವರ ನಿಯಂತ್ರಣಕ್ಕೆ ಕಾನೂನು ತಂದಿದ್ದರು. ಅದು ಕೋರ್ಟ್ ನಲ್ಲಿ ಸ್ಟೇ ಆಗಿದೆ. ಈ ಸರ್ಕಾರ ಕೂಡಲೇ ಅದನ್ನು ತೆರವುಗೊಳಿಸಿ ಕಠಿಣ ಕ್ರಮ ಕೈಗೊಳ್ಳುವ ಅಧಿಕಾರ ಪಡೆದು, ಮೈಕ್ರೊ ಫೈನಾನ್ಸ್ ಗಳನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿದರು‌‌.

ಇತ್ತೀಚಿನ ಸುದ್ದಿ

ಜಾಹೀರಾತು