9:15 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ಖತರ್ನಾಕ್ ಗ್ಯಾಂಗ್: ಒಂಟಿ ಮನೆ, ಮಹಿಳೆಯರೇ ಇವರ ಟಾರ್ಗೆಟ್!

05/01/2025, 20:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.Com

ಜಿಲ್ಲೆಯಲ್ಲಿ ಒಂದ ಹೊಸ ವರಸೆ ಶುರುವಾಗಿದೆ. ಒಂಟಿ ಮನೆ ಹಾಗೂ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಬರಲಾಗುತ್ತಿದೆ. ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಇಂತಹ ಘಟನೆ ನಡೆದಿದೆ.


ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ತಂಡ ಇದಾಗಿದೆ.
ಮೈಲಾರಲಿಂಗ ಒಕ್ಕಲಿನ ಬಟ್ಟೆ ಧರಿಸಿ ಮನೆಗಳಿಗೆ ಈ ನಾಲ್ವರು ನುಗ್ಗುತ್ತಾರೆ. ಮನೆಯವರು ಬಾಗಿಲು ತೆಗೆಯೋವರೆಗೂ ಹೋಗಲ್ಲ… ಮನೆ ಹಿಂದೆ-ಮುಂದೆ ಎಲ್ಲಾ ಸುತ್ತಾಡುತ್ತಾರೆ. ಗೌಡ್ರೆ, ಅಮ್ಮ, ಅಮ್ಮಾವ್ರೆ, ಅವ್ವ, ಸರ್, ಮಾಲೀಕರೇ, ಅಪ್ಪಾಜಿ ಅಂತೆಲ್ಲಾ ಮನೆಯವರು ಹೊರಗೆ ಬರುವವರೆಗೂ ಕೂಗ್ತಾರೆ.
ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಬಾಳೆಹಳ್ಳಿ ರಮೇಶ್ ಗೌಡ ಅವರ ಮನೆಗೆ ಈ ನಾಲ್ವರ ಗ್ಯಾಂಗ್ ಬಂದಿದೆ. ಮನೆಯವರು ಬರೋವರೆಗೂ ಅವರ ಚಲನ-ವಲನ, ಹಾವಾಭಾವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನ ಕಂಡ ಕೂಡಲೇ ತಲೆಗೆ ಗೌನ್ ಹಾಕಿ ನಿಮ್ಮ ಮನೆಗೆ ಮೈಲಾರಲಿಂಗ ಬಂದಾನಾ ಅಂತ ಹೇಳುತ್ತಾರೆ.
ಮನೆಯವ್ರು ಬಾಗಿಲು ತೆಗೆದ ಕೂಡಲೇ ಸೀದಾ ಒಳಗೆ ಹೋಗ್ತಾರೆ. ಮಹಿಳೆಯರಿಗೆ ದೇವರು ಅಂತ ಹೆದರಿಸಿ ಹಣ ಪಡೆಯುತ್ತಾರೆ. ಮುಂದೆ ಈ ತಂಡದಿಂದ ಏನಾದರೂ ಅವಘಡ ಸಂಭವಿಸಬಹುದೆಂದು ಮಲೆನಾಡಿಗರು ಎಚ್ಚರಗೊಂಡಿದ್ದಾರೆ. ಇವರು ಎಲ್ಲೇ ಕಂಡರೂ ಕೂಡಲೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು