10:43 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ಖತರ್ನಾಕ್ ಗ್ಯಾಂಗ್: ಒಂಟಿ ಮನೆ, ಮಹಿಳೆಯರೇ ಇವರ ಟಾರ್ಗೆಟ್!

05/01/2025, 20:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.Com

ಜಿಲ್ಲೆಯಲ್ಲಿ ಒಂದ ಹೊಸ ವರಸೆ ಶುರುವಾಗಿದೆ. ಒಂಟಿ ಮನೆ ಹಾಗೂ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಬರಲಾಗುತ್ತಿದೆ. ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಇಂತಹ ಘಟನೆ ನಡೆದಿದೆ.


ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ತಂಡ ಇದಾಗಿದೆ.
ಮೈಲಾರಲಿಂಗ ಒಕ್ಕಲಿನ ಬಟ್ಟೆ ಧರಿಸಿ ಮನೆಗಳಿಗೆ ಈ ನಾಲ್ವರು ನುಗ್ಗುತ್ತಾರೆ. ಮನೆಯವರು ಬಾಗಿಲು ತೆಗೆಯೋವರೆಗೂ ಹೋಗಲ್ಲ… ಮನೆ ಹಿಂದೆ-ಮುಂದೆ ಎಲ್ಲಾ ಸುತ್ತಾಡುತ್ತಾರೆ. ಗೌಡ್ರೆ, ಅಮ್ಮ, ಅಮ್ಮಾವ್ರೆ, ಅವ್ವ, ಸರ್, ಮಾಲೀಕರೇ, ಅಪ್ಪಾಜಿ ಅಂತೆಲ್ಲಾ ಮನೆಯವರು ಹೊರಗೆ ಬರುವವರೆಗೂ ಕೂಗ್ತಾರೆ.
ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಬಾಳೆಹಳ್ಳಿ ರಮೇಶ್ ಗೌಡ ಅವರ ಮನೆಗೆ ಈ ನಾಲ್ವರ ಗ್ಯಾಂಗ್ ಬಂದಿದೆ. ಮನೆಯವರು ಬರೋವರೆಗೂ ಅವರ ಚಲನ-ವಲನ, ಹಾವಾಭಾವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನ ಕಂಡ ಕೂಡಲೇ ತಲೆಗೆ ಗೌನ್ ಹಾಕಿ ನಿಮ್ಮ ಮನೆಗೆ ಮೈಲಾರಲಿಂಗ ಬಂದಾನಾ ಅಂತ ಹೇಳುತ್ತಾರೆ.
ಮನೆಯವ್ರು ಬಾಗಿಲು ತೆಗೆದ ಕೂಡಲೇ ಸೀದಾ ಒಳಗೆ ಹೋಗ್ತಾರೆ. ಮಹಿಳೆಯರಿಗೆ ದೇವರು ಅಂತ ಹೆದರಿಸಿ ಹಣ ಪಡೆಯುತ್ತಾರೆ. ಮುಂದೆ ಈ ತಂಡದಿಂದ ಏನಾದರೂ ಅವಘಡ ಸಂಭವಿಸಬಹುದೆಂದು ಮಲೆನಾಡಿಗರು ಎಚ್ಚರಗೊಂಡಿದ್ದಾರೆ. ಇವರು ಎಲ್ಲೇ ಕಂಡರೂ ಕೂಡಲೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು