4:34 AM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ: ಚಿತ್ರದುರ್ಗದಿಂದ ಗೆಲುವು ಕಂಡ ಬಿಜೆಪಿ ಅಭ್ಯರ್ಥಿ ಕಾರಜೋಳ ಪ್ರತಿಕ್ರಿಯೆ

04/06/2024, 20:04

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿದ್ದಾರೆ. 47065 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ವಿರುದ್ಧ ಗೆದ್ದು ಬೀಗಿದ್ದಾರೆ. ಜಿಲ್ಲೆಗೆ ಹೊಸಬ ಆಗಿದ್ರು ವಿಶ್ವಾಸ ಇಟ್ಟು ಆಯ್ಕೆ ಮಾಡಿದ್ದಾರೆ. ಹೊರಗಿನವರು, ಸ್ಥಳೀಯರು ಎಂಬ ಚರ್ಚೆ ನಡುವೆ ಗೆಲುವು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕಾರಜೋಳ ಅವರು ಜಿಲ್ಲೆಯಲ್ಲಿ ನನಗೆ ಸಾಕಷ್ಟು ವಿರೋಧ ಇರಲಿಲ್ಲ. ಪಕ್ಷದ ಅಧ್ಯಕ್ಷರು ಎಲ್ಲರೂ ಸಹಕಾರ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿ ಮತದಾರರು ಮೂರನೇ ಬಾರಿಗೆ ಬಹುಮತಕ್ಕೆ ಅವಕಾಶ ನೀಡಿದ್ದಾರೆ. ಪಕ್ಷದ ನಾಯಕರು ನಿರ್ಧಾರ ಮಾಡಿ ಅಭ್ಯರ್ಥಿ ಮಾಡಿದ್ದರು. ಆಗ ಸಮಯ ಇರಲಿಲ್ಲ. ನಾನು ನಾಮಪತ್ರ ಸಲ್ಲಿಕೆಗೆ ಮಾತ್ರ ಬಂದೆ. ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ದೇಶದ ಜನರ ಆಶಯವಾಗಿತ್ತು. ಮೋದಿಯನ್ನು ಮೆಚ್ಚಿ ಮೂರನೇ ಬಾರಿಗೆ ಬಹುಮತ ಕೊಟ್ಟಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ, ರಾಜ್ಯ ನಾಯಕರಿಗೆ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ. ಜನರ ಆಸೆ ಇದು ಜಿಲ್ಲೆಯ ಅಭಿವೃದ್ದಿ ಆಗಬೇಕು ಎನ್ನುವುದಿದೆ.
ಅಭಿವೃದ್ಧಿ ಬೇಡಿಕೆಗಳ ಅರಿತು ಕೇಂದ್ರದಿಂದ ಏನು ಜಿಲ್ಲೆಗೆ ಅಭಿವೃದ್ಧಿ ಆಗಬೇಕು ಅದನ್ನು ಮಾಡ್ತೀನಿ ಎಂದು ಭರವಸೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು