9:36 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ: ಚಿತ್ರದುರ್ಗದಿಂದ ಗೆಲುವು ಕಂಡ ಬಿಜೆಪಿ ಅಭ್ಯರ್ಥಿ ಕಾರಜೋಳ ಪ್ರತಿಕ್ರಿಯೆ

04/06/2024, 20:04

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿದ್ದಾರೆ. 47065 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ವಿರುದ್ಧ ಗೆದ್ದು ಬೀಗಿದ್ದಾರೆ. ಜಿಲ್ಲೆಗೆ ಹೊಸಬ ಆಗಿದ್ರು ವಿಶ್ವಾಸ ಇಟ್ಟು ಆಯ್ಕೆ ಮಾಡಿದ್ದಾರೆ. ಹೊರಗಿನವರು, ಸ್ಥಳೀಯರು ಎಂಬ ಚರ್ಚೆ ನಡುವೆ ಗೆಲುವು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕಾರಜೋಳ ಅವರು ಜಿಲ್ಲೆಯಲ್ಲಿ ನನಗೆ ಸಾಕಷ್ಟು ವಿರೋಧ ಇರಲಿಲ್ಲ. ಪಕ್ಷದ ಅಧ್ಯಕ್ಷರು ಎಲ್ಲರೂ ಸಹಕಾರ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿ ಮತದಾರರು ಮೂರನೇ ಬಾರಿಗೆ ಬಹುಮತಕ್ಕೆ ಅವಕಾಶ ನೀಡಿದ್ದಾರೆ. ಪಕ್ಷದ ನಾಯಕರು ನಿರ್ಧಾರ ಮಾಡಿ ಅಭ್ಯರ್ಥಿ ಮಾಡಿದ್ದರು. ಆಗ ಸಮಯ ಇರಲಿಲ್ಲ. ನಾನು ನಾಮಪತ್ರ ಸಲ್ಲಿಕೆಗೆ ಮಾತ್ರ ಬಂದೆ. ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ದೇಶದ ಜನರ ಆಶಯವಾಗಿತ್ತು. ಮೋದಿಯನ್ನು ಮೆಚ್ಚಿ ಮೂರನೇ ಬಾರಿಗೆ ಬಹುಮತ ಕೊಟ್ಟಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ, ರಾಜ್ಯ ನಾಯಕರಿಗೆ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ. ಜನರ ಆಸೆ ಇದು ಜಿಲ್ಲೆಯ ಅಭಿವೃದ್ದಿ ಆಗಬೇಕು ಎನ್ನುವುದಿದೆ.
ಅಭಿವೃದ್ಧಿ ಬೇಡಿಕೆಗಳ ಅರಿತು ಕೇಂದ್ರದಿಂದ ಏನು ಜಿಲ್ಲೆಗೆ ಅಭಿವೃದ್ಧಿ ಆಗಬೇಕು ಅದನ್ನು ಮಾಡ್ತೀನಿ ಎಂದು ಭರವಸೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು