11:45 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ: ಚಿತ್ರದುರ್ಗದಿಂದ ಗೆಲುವು ಕಂಡ ಬಿಜೆಪಿ ಅಭ್ಯರ್ಥಿ ಕಾರಜೋಳ ಪ್ರತಿಕ್ರಿಯೆ

04/06/2024, 20:04

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿದ್ದಾರೆ. 47065 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ವಿರುದ್ಧ ಗೆದ್ದು ಬೀಗಿದ್ದಾರೆ. ಜಿಲ್ಲೆಗೆ ಹೊಸಬ ಆಗಿದ್ರು ವಿಶ್ವಾಸ ಇಟ್ಟು ಆಯ್ಕೆ ಮಾಡಿದ್ದಾರೆ. ಹೊರಗಿನವರು, ಸ್ಥಳೀಯರು ಎಂಬ ಚರ್ಚೆ ನಡುವೆ ಗೆಲುವು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕಾರಜೋಳ ಅವರು ಜಿಲ್ಲೆಯಲ್ಲಿ ನನಗೆ ಸಾಕಷ್ಟು ವಿರೋಧ ಇರಲಿಲ್ಲ. ಪಕ್ಷದ ಅಧ್ಯಕ್ಷರು ಎಲ್ಲರೂ ಸಹಕಾರ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿ ಮತದಾರರು ಮೂರನೇ ಬಾರಿಗೆ ಬಹುಮತಕ್ಕೆ ಅವಕಾಶ ನೀಡಿದ್ದಾರೆ. ಪಕ್ಷದ ನಾಯಕರು ನಿರ್ಧಾರ ಮಾಡಿ ಅಭ್ಯರ್ಥಿ ಮಾಡಿದ್ದರು. ಆಗ ಸಮಯ ಇರಲಿಲ್ಲ. ನಾನು ನಾಮಪತ್ರ ಸಲ್ಲಿಕೆಗೆ ಮಾತ್ರ ಬಂದೆ. ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ದೇಶದ ಜನರ ಆಶಯವಾಗಿತ್ತು. ಮೋದಿಯನ್ನು ಮೆಚ್ಚಿ ಮೂರನೇ ಬಾರಿಗೆ ಬಹುಮತ ಕೊಟ್ಟಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ, ರಾಜ್ಯ ನಾಯಕರಿಗೆ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ. ಜನರ ಆಸೆ ಇದು ಜಿಲ್ಲೆಯ ಅಭಿವೃದ್ದಿ ಆಗಬೇಕು ಎನ್ನುವುದಿದೆ.
ಅಭಿವೃದ್ಧಿ ಬೇಡಿಕೆಗಳ ಅರಿತು ಕೇಂದ್ರದಿಂದ ಏನು ಜಿಲ್ಲೆಗೆ ಅಭಿವೃದ್ಧಿ ಆಗಬೇಕು ಅದನ್ನು ಮಾಡ್ತೀನಿ ಎಂದು ಭರವಸೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು