7:23 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ! ; ಕಾರಣ ಏನು ?

28/01/2022, 14:41

ಬೆಂಗಳೂರು (Reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. 2018ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮರಿಸ್ವಾಮಿ ಅಣ್ಣನ ಮಗ ಡಾ. ನೀರಜ್‌ ಅವರನ್ನು ಸೌಂದರ್ಯ ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ.

ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ.
ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು