2:39 PM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ 

27/05/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ 

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೋವಿಡ್-19  ಎರಡನೇ  ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಪ್ರತಿನಿತ್ಯ  ಹೆಚ್ಚು ಕೊರೊನಾ ಸೋಂಕಿತರು ಮತ್ತು ಬ್ಲ್ಯಾಕ್ ಪಂಗಸ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅತ್ಯುನ್ನತ ದರ್ಜೆಯ ಆಸ್ಪತ್ರೆಗಳ ಕೊರತೆ ಹಾಗೂ ಜಿಲ್ಲೆಗೆ ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಗಳು  ಸರಿಯಾದ ವೇಳೆಗೆ ಸರಬರಾಜು ಮಾಡುತ್ತಿಲ್ಲ,. ರಾಯಚೂರು ಗ್ರಾಮೀಣದ ರೈತರಿಗೆ 12 ತಾಸು ವಿದ್ಯುತ್ ಕಡಿತ ಮಾಡಿ ಕೇವಲ 7 ತಾಸು ಮಾತ್ರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುತ್ತಿದ್ದಾರೆ. ಕನಿಷ್ಠ 12 ತಾಸು ವಿದ್ಯುತ್ ನೀಡಬೇಕೆಂದು ತಿಳಿಸಿದರು. 

ಮುಂಗಾರು ಪ್ರಾರಂಭವಾಗುವುದರಿಂದ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ನೀಡಬೇಕು. ಕ್ಷೇತ್ರದಲ್ಲಿ  ಕೃಷಿ ಇನ್ನು ಮುಂತಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲು ರಾಜ್ಯಸರ್ಕಾರಕ್ಕೆ ಒತ್ತಾಯಿಸುವಂತೆ ಶಾಸಕರು ಚರ್ಚಿಸಿದರು . ಈ ಸಂದರ್ಭದಲ್ಲಿ  ಲಿಂಗಸೂಗುರು ಶಾಸಕ ಡಿ.ಎಸ್. ಹೂಲಗೇರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು