11:27 AM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ 

27/05/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ 

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೋವಿಡ್-19  ಎರಡನೇ  ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಪ್ರತಿನಿತ್ಯ  ಹೆಚ್ಚು ಕೊರೊನಾ ಸೋಂಕಿತರು ಮತ್ತು ಬ್ಲ್ಯಾಕ್ ಪಂಗಸ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅತ್ಯುನ್ನತ ದರ್ಜೆಯ ಆಸ್ಪತ್ರೆಗಳ ಕೊರತೆ ಹಾಗೂ ಜಿಲ್ಲೆಗೆ ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಗಳು  ಸರಿಯಾದ ವೇಳೆಗೆ ಸರಬರಾಜು ಮಾಡುತ್ತಿಲ್ಲ,. ರಾಯಚೂರು ಗ್ರಾಮೀಣದ ರೈತರಿಗೆ 12 ತಾಸು ವಿದ್ಯುತ್ ಕಡಿತ ಮಾಡಿ ಕೇವಲ 7 ತಾಸು ಮಾತ್ರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುತ್ತಿದ್ದಾರೆ. ಕನಿಷ್ಠ 12 ತಾಸು ವಿದ್ಯುತ್ ನೀಡಬೇಕೆಂದು ತಿಳಿಸಿದರು. 

ಮುಂಗಾರು ಪ್ರಾರಂಭವಾಗುವುದರಿಂದ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ನೀಡಬೇಕು. ಕ್ಷೇತ್ರದಲ್ಲಿ  ಕೃಷಿ ಇನ್ನು ಮುಂತಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲು ರಾಜ್ಯಸರ್ಕಾರಕ್ಕೆ ಒತ್ತಾಯಿಸುವಂತೆ ಶಾಸಕರು ಚರ್ಚಿಸಿದರು . ಈ ಸಂದರ್ಭದಲ್ಲಿ  ಲಿಂಗಸೂಗುರು ಶಾಸಕ ಡಿ.ಎಸ್. ಹೂಲಗೇರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು