12:15 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ 

27/05/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ 

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೋವಿಡ್-19  ಎರಡನೇ  ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಪ್ರತಿನಿತ್ಯ  ಹೆಚ್ಚು ಕೊರೊನಾ ಸೋಂಕಿತರು ಮತ್ತು ಬ್ಲ್ಯಾಕ್ ಪಂಗಸ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅತ್ಯುನ್ನತ ದರ್ಜೆಯ ಆಸ್ಪತ್ರೆಗಳ ಕೊರತೆ ಹಾಗೂ ಜಿಲ್ಲೆಗೆ ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಗಳು  ಸರಿಯಾದ ವೇಳೆಗೆ ಸರಬರಾಜು ಮಾಡುತ್ತಿಲ್ಲ,. ರಾಯಚೂರು ಗ್ರಾಮೀಣದ ರೈತರಿಗೆ 12 ತಾಸು ವಿದ್ಯುತ್ ಕಡಿತ ಮಾಡಿ ಕೇವಲ 7 ತಾಸು ಮಾತ್ರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುತ್ತಿದ್ದಾರೆ. ಕನಿಷ್ಠ 12 ತಾಸು ವಿದ್ಯುತ್ ನೀಡಬೇಕೆಂದು ತಿಳಿಸಿದರು. 

ಮುಂಗಾರು ಪ್ರಾರಂಭವಾಗುವುದರಿಂದ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ನೀಡಬೇಕು. ಕ್ಷೇತ್ರದಲ್ಲಿ  ಕೃಷಿ ಇನ್ನು ಮುಂತಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲು ರಾಜ್ಯಸರ್ಕಾರಕ್ಕೆ ಒತ್ತಾಯಿಸುವಂತೆ ಶಾಸಕರು ಚರ್ಚಿಸಿದರು . ಈ ಸಂದರ್ಭದಲ್ಲಿ  ಲಿಂಗಸೂಗುರು ಶಾಸಕ ಡಿ.ಎಸ್. ಹೂಲಗೇರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು