6:30 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ 

27/05/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ 

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೋವಿಡ್-19  ಎರಡನೇ  ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಪ್ರತಿನಿತ್ಯ  ಹೆಚ್ಚು ಕೊರೊನಾ ಸೋಂಕಿತರು ಮತ್ತು ಬ್ಲ್ಯಾಕ್ ಪಂಗಸ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅತ್ಯುನ್ನತ ದರ್ಜೆಯ ಆಸ್ಪತ್ರೆಗಳ ಕೊರತೆ ಹಾಗೂ ಜಿಲ್ಲೆಗೆ ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಗಳು  ಸರಿಯಾದ ವೇಳೆಗೆ ಸರಬರಾಜು ಮಾಡುತ್ತಿಲ್ಲ,. ರಾಯಚೂರು ಗ್ರಾಮೀಣದ ರೈತರಿಗೆ 12 ತಾಸು ವಿದ್ಯುತ್ ಕಡಿತ ಮಾಡಿ ಕೇವಲ 7 ತಾಸು ಮಾತ್ರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುತ್ತಿದ್ದಾರೆ. ಕನಿಷ್ಠ 12 ತಾಸು ವಿದ್ಯುತ್ ನೀಡಬೇಕೆಂದು ತಿಳಿಸಿದರು. 

ಮುಂಗಾರು ಪ್ರಾರಂಭವಾಗುವುದರಿಂದ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ನೀಡಬೇಕು. ಕ್ಷೇತ್ರದಲ್ಲಿ  ಕೃಷಿ ಇನ್ನು ಮುಂತಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲು ರಾಜ್ಯಸರ್ಕಾರಕ್ಕೆ ಒತ್ತಾಯಿಸುವಂತೆ ಶಾಸಕರು ಚರ್ಚಿಸಿದರು . ಈ ಸಂದರ್ಭದಲ್ಲಿ  ಲಿಂಗಸೂಗುರು ಶಾಸಕ ಡಿ.ಎಸ್. ಹೂಲಗೇರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು