4:36 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ 

27/05/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ 

ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕೋವಿಡ್-19  ಎರಡನೇ  ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಪ್ರತಿನಿತ್ಯ  ಹೆಚ್ಚು ಕೊರೊನಾ ಸೋಂಕಿತರು ಮತ್ತು ಬ್ಲ್ಯಾಕ್ ಪಂಗಸ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅತ್ಯುನ್ನತ ದರ್ಜೆಯ ಆಸ್ಪತ್ರೆಗಳ ಕೊರತೆ ಹಾಗೂ ಜಿಲ್ಲೆಗೆ ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಗಳು  ಸರಿಯಾದ ವೇಳೆಗೆ ಸರಬರಾಜು ಮಾಡುತ್ತಿಲ್ಲ,. ರಾಯಚೂರು ಗ್ರಾಮೀಣದ ರೈತರಿಗೆ 12 ತಾಸು ವಿದ್ಯುತ್ ಕಡಿತ ಮಾಡಿ ಕೇವಲ 7 ತಾಸು ಮಾತ್ರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುತ್ತಿದ್ದಾರೆ. ಕನಿಷ್ಠ 12 ತಾಸು ವಿದ್ಯುತ್ ನೀಡಬೇಕೆಂದು ತಿಳಿಸಿದರು. 

ಮುಂಗಾರು ಪ್ರಾರಂಭವಾಗುವುದರಿಂದ ರೈತರಿಗೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ರೈತರಿಗೆ ಸಮರ್ಪಕವಾಗಿ ನೀಡಬೇಕು. ಕ್ಷೇತ್ರದಲ್ಲಿ  ಕೃಷಿ ಇನ್ನು ಮುಂತಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲು ರಾಜ್ಯಸರ್ಕಾರಕ್ಕೆ ಒತ್ತಾಯಿಸುವಂತೆ ಶಾಸಕರು ಚರ್ಚಿಸಿದರು . ಈ ಸಂದರ್ಭದಲ್ಲಿ  ಲಿಂಗಸೂಗುರು ಶಾಸಕ ಡಿ.ಎಸ್. ಹೂಲಗೇರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು