11:43 PM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

31/10/2023, 21:34

ಬಂಟ್ವಾಳ(reporterkarnataka.com): ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇಟ್ಟಾಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿಪಡಿಸಲು ಸಾಧ್ಯಗುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಹೇಳಿದರು.
ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮುದಾಯದತ್ತ ಕಾರ್ಯಕ್ರಮದ ಶಾಲಾ ಶಿಕ್ಷಕ ರಕ್ಷಕ ಸಭೆಯನ್ನುದ್ದೇಶಿಸಿ ಮಾತನಾಡಿದರು.


ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಲಹೆ ಅಭಿಪ್ರಾಯವನ್ನು ಪಡೆದು ಸದರಿ ವರ್ಷದ ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುದೆಂದು ಪೋಷಕರ ಒಪ್ಪಿಗೆ ಮೇರೆಗೆ ಶಾಲಾಭಿವೃದ್ಧಿ ಸಮಿತಿಯ ಮೂಲಕ ನಿರ್ಣಯಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ, ಶಾಲಾ ಶಿಕ್ಷಕರುಗಳಾದ ಶಕುಂತಲಾ ಎಂ. ಬಿ., ಸಂಗೀತಾ ಶರ್ಮಾ ಪಿ. ಜಿ., ಅನುಷಾ, ಮುರ್ಷಿದಾ ಬಾನು, ಮಮತಾ ಮೊದಲಾದವರು ಉಪಸ್ಥಿತರಿದ್ದರು. ಪೋಷಕರ ಪ್ರಶ್ನೆಗಳಿಗೆ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿಸಮಿತಿಯ ಸದಸ್ಯರುಗಳು ಹಾಜರಿದ್ದರು.ಶಿಕ್ಷಕಿ ಮಮತಾ ಸ್ವಾಗತಿಸಿದರು.ಶಿಕ್ಷಕಿ ಮುರ್ಷಿದಾ ಬಾನು ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು