8:15 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

31/10/2023, 21:34

ಬಂಟ್ವಾಳ(reporterkarnataka.com): ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇಟ್ಟಾಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿಪಡಿಸಲು ಸಾಧ್ಯಗುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಹೇಳಿದರು.
ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮುದಾಯದತ್ತ ಕಾರ್ಯಕ್ರಮದ ಶಾಲಾ ಶಿಕ್ಷಕ ರಕ್ಷಕ ಸಭೆಯನ್ನುದ್ದೇಶಿಸಿ ಮಾತನಾಡಿದರು.


ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಲಹೆ ಅಭಿಪ್ರಾಯವನ್ನು ಪಡೆದು ಸದರಿ ವರ್ಷದ ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುದೆಂದು ಪೋಷಕರ ಒಪ್ಪಿಗೆ ಮೇರೆಗೆ ಶಾಲಾಭಿವೃದ್ಧಿ ಸಮಿತಿಯ ಮೂಲಕ ನಿರ್ಣಯಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ, ಶಾಲಾ ಶಿಕ್ಷಕರುಗಳಾದ ಶಕುಂತಲಾ ಎಂ. ಬಿ., ಸಂಗೀತಾ ಶರ್ಮಾ ಪಿ. ಜಿ., ಅನುಷಾ, ಮುರ್ಷಿದಾ ಬಾನು, ಮಮತಾ ಮೊದಲಾದವರು ಉಪಸ್ಥಿತರಿದ್ದರು. ಪೋಷಕರ ಪ್ರಶ್ನೆಗಳಿಗೆ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿಸಮಿತಿಯ ಸದಸ್ಯರುಗಳು ಹಾಜರಿದ್ದರು.ಶಿಕ್ಷಕಿ ಮಮತಾ ಸ್ವಾಗತಿಸಿದರು.ಶಿಕ್ಷಕಿ ಮುರ್ಷಿದಾ ಬಾನು ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು