2:34 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

31/10/2023, 21:34

ಬಂಟ್ವಾಳ(reporterkarnataka.com): ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇಟ್ಟಾಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿಪಡಿಸಲು ಸಾಧ್ಯಗುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಹೇಳಿದರು.
ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮುದಾಯದತ್ತ ಕಾರ್ಯಕ್ರಮದ ಶಾಲಾ ಶಿಕ್ಷಕ ರಕ್ಷಕ ಸಭೆಯನ್ನುದ್ದೇಶಿಸಿ ಮಾತನಾಡಿದರು.


ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಲಹೆ ಅಭಿಪ್ರಾಯವನ್ನು ಪಡೆದು ಸದರಿ ವರ್ಷದ ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುದೆಂದು ಪೋಷಕರ ಒಪ್ಪಿಗೆ ಮೇರೆಗೆ ಶಾಲಾಭಿವೃದ್ಧಿ ಸಮಿತಿಯ ಮೂಲಕ ನಿರ್ಣಯಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ, ಶಾಲಾ ಶಿಕ್ಷಕರುಗಳಾದ ಶಕುಂತಲಾ ಎಂ. ಬಿ., ಸಂಗೀತಾ ಶರ್ಮಾ ಪಿ. ಜಿ., ಅನುಷಾ, ಮುರ್ಷಿದಾ ಬಾನು, ಮಮತಾ ಮೊದಲಾದವರು ಉಪಸ್ಥಿತರಿದ್ದರು. ಪೋಷಕರ ಪ್ರಶ್ನೆಗಳಿಗೆ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿಸಮಿತಿಯ ಸದಸ್ಯರುಗಳು ಹಾಜರಿದ್ದರು.ಶಿಕ್ಷಕಿ ಮಮತಾ ಸ್ವಾಗತಿಸಿದರು.ಶಿಕ್ಷಕಿ ಮುರ್ಷಿದಾ ಬಾನು ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು