5:21 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

Breaking : ಮಕ್ಕಳ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯೂ ಅನ್ಯರ ಪಾಲು: ಅಕ್ರಮ ಸಾಗಾಟ ಪತ್ತೆ ಮಾಡಿದ ಅಥಣಿ ಗ್ರಾಮಸ್ಥರು !

17/09/2021, 11:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಪಡಿತರ ಅಕ್ಕಿ ಅಕ್ರಮ ಸಾಗಾಟ, ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಅವ್ಯವಹಾರದ ನಡುವೆ ಇನ್ನೊಂದು ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಂಗನವಾಡಿ ಮತ್ತು ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿ ನೀಡುವ ಹಾಲಿನ ಪುಡಿಯನ್ನು ಅಕ್ರಮ ಸಾಗಾಟ ನಡೆದಿದೆ.

ಅಪೌಷ್ಟಿಕತೆ ಹೋಗಲಾಡಿಸಲು ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತದೆ. ಆದರೆ ಚಿಕ್ಕೋಡಿ ಉಪವಿಭಾಗ ಅಥಣಿ ತಾಲೂಕಿನ ಖಿಳೆಗಾಂವ್ ಗ್ರಾಮದಲ್ಲಿ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿರುವ ಓರ್ವನನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಬೈಕ್ ಮೇಲೆ ಸಾಗಾಟ ಮಾಡುತ್ತಿರುವ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಗಂಗಾಧರ ಶಂಕರ ಪತ್ತಾರ ಎಂದು ತಿಳಿದು ಬಂದಿದೆ. 

ಕಳೆದ ಒಂದು ವರ್ಷಗಳಿಂದ, ಇದೇ ರೀತಿಯಾಗಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ, ಖಿಳೇಗಾಂವ್ ಗ್ರಾಮದ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಂದ ಹಾಲಿನಪುಡಿ ಪಾಕೆಟ್ಟು ತೆಗೆದುಕೊಂಡು ಸಾಗಾಟ ಮಾಡುತ್ತಿರುವ ವ್ಯಕ್ತಿಯನ್ನು ಗ್ರಾಮಸ್ಥರು ತಡೆಹಿಡಿದು ತರಾಟೆ ತೆಗೆದುಕೊಂಡರು ಘಟನೆ ಸಂಭವಿಸಿದೆ. ಅದರೊಂದಿಗೆ ಅವನನ್ನು ಅಥಣಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ  ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು