8:13 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿದ್ಯಾ

06/08/2023, 11:41

ವಿಟ್ಲ(reporterkarnataka.com): ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ ವಿದ್ಯಾ ಜೆ. ಕೆ. ಹೇಳಿದರು.
ಅವರು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ನುಡಿದರು.
ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಉದಾಹರಿಸುತ್ತಾ ಇಂತಹ ಅಮಾನವೀಯ ಕೃತ್ಯಗಳನ್ನು ತಡೆಗಟ್ಟುವಲ್ಲಿ ಸಮಾಜದ ಪ್ರತಿಯೊಬ್ಬರೂ ಸಹಕರಿಸಬೇಕಾದ ಅನಿವಾರ್ಯತೆಯನ್ನು ಹೇಳಿದರು.
ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದದಲ್ಲಿ ಇವರು ಪೊಲೀಸ್ ನೇಮಕಾತಿ, ತರಬೇತಿ ಬಗ್ಗೆ ಹಾಗೂ ಸಮಾಜ ವಿರೋಧೀ ಕೃತ್ಯಗಳನ್ನು ತಡೆಯಲು ಇರುವ ವಿವಿಧ ಕಾನೂನುಗಳ ಬಗ್ಗೆಯೂ ಸವಿವರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್. ಡಿ. ಎಂ .ಸಿ ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ, ಹಿರಿಯರಾದ ಮುರುವ ನಡುಮನೆ ಮಹಾಬಲ ಭಟ್ ಹಾಗೂ ಮುಖ್ಯ ಶಿಕ್ಷಕರಾದ ಭುವನೇಶ್ವರ್ ಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಉಮಾನಾಥ ರೈ ಮೇರಾವು , ಹಿರಿಯ ಶಿಕ್ಷಕಿ ಲತಾ ಯು ಉಪಸ್ಥಿತರಿದ್ದರು.
ಪೋಷಕ ಹಾಗೂ ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಿಕ್ಷಕ ಸುಧೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು