5:00 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ವ್ಯವಸ್ಥೆಗೆ ಸಹಾಯ ಹಸ್ತ: ಫೈಟರ್ ರವಿ ಸಂಕಲ್ಪ

26/11/2022, 20:45

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಫೈಟರ್ ರವಿ ಅವರು ಶಿಕ್ಷಣದ ಜೊತೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಸಹಾಯಹಸ್ತ ನೀಡುವುದಾಗಿ ಹೇಳಿದ್ದಾರೆ.
ಅವರು ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ವಿವಿಧ ಸರ್ಕಾರಿ ಪ್ರೌಢಶಾಲೆ , ವಡೇರಪುರ ಹಟ್ನಾ ಕೆಂಬಾರೆ, ಕಾಳಿಂಗನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ಶಾಲಾ ಕಾರ್ಯಕ್ರಮಗಳಿಗೆ ಸಹಾಯದ ಭರವಸೆ ನೀಡಿದರು.
ಸಾಮಾಜಿಕ ಸೇವೆಗಳಲ್ಲಿ ಆರೋಗ್ಯ ಶುದ್ಧ ನೀರು ಶಿಕ್ಷಣ ಶೈಕ್ಷಣಿಕ ಪ್ರಗತಿಯತ್ತ ತಾಲೂಕಿನ ಎಲ್ಲಾ ಶಾಲೆಗಳಿಗೂ ಕೈಲಾದ ಸಹಾಯ ಮಾಡುತ್ತಿರುವ ಸಮಾಜ ಸೇವಕರಾದ ರವಿಯವರು ತಾಲೂಕಿನ ಅಭಿವೃದ್ಧಿಯ ಮುಂಚೂಣಿಗೆ ಹೊಸ ಅಧ್ಯಯನ ಬರೆಯಲು ಇವರ ಕನಸಿನ ಗುರಿ ತ್ರಿಕಲ್ಪ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ.
ರವಿಯವರು ಇಂದು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಆಟದ ಸಾಮಗ್ರಿಗಳು ಕುಡಿಯುವ ನೀರಿನ ವ್ಯವಸ್ಥೆ ಮಾಡಿಸುವ ಭರವಸೆ ನೀಡುವ ಮುಖಾಂತರ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ಕೊಡುವ ಭರವಸೆಯ ಆಶಾ ಕಿರಣವಾಗಿದೆ.
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ತಿಮ್ಮರಾಯಗೌಡ ಲೋಕೇಶ್ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಜೆ ಕುಮಾರ್ ಹಾಗೂ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ದೇವಲಾಪುರ ಜಗದೀಶ್ ನಾಗಮಂಗಲ

ಇತ್ತೀಚಿನ ಸುದ್ದಿ

ಜಾಹೀರಾತು