2:11 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು: ಮುರಿಗೆಣ್ಣ ದೇಸಾಯಿ

16/11/2024, 12:20

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕೆಲಸ ಶಾಲೆ ಮತ್ತು ಮನೆಗಳಲ್ಲಿ ಆಗಬೇಕಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು. ಅವರು ನಮ್ಮ ದೇಶದ ಆಸ್ತಿ ಎಂದು ಮುರಿಗೆಣ್ಣ ದೇಸಾಯಿ ಹೇಳಿದರು.
ಪಟ್ಟಣದ ಸ್ಪಂದನ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಜವಾಹ‌ರ್ ಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಅವರ ಭಾವಚಿತಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಕ್ಕಳ ದಿನಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬರು ದೇಶದ ಅಭಿವೃದ್ಧಿಯ ಚಿಂತನೆಯನ್ನು ಮಾಡಬೇಕು. ಭವ್ಯ ಭಾರತದ ನಿರ್ಮಾಣಕ್ಕಾಗಿ ಚಿಕ್ಕ ವಯಸ್ಸಿನಲ್ಲಿಯೆ ಮಕ್ಕಳಿಗೆ ದೇಶ ಪ್ರೇಮವನ್ನು ಬೆಳೆಸುವ ಕಾರ್ಯ ಶಿಕ್ಷಕರು ಹಾಗೂ ಪಾಲಕರಿಂದ ಆಗಬೇಕಾಗಿದೆ ಎಂದು ಹೇಳಿದರು.
ಶಾಲಾ ಹಿರಿಯ ಶಿಕ್ಷಕ ರಾಮಣ್ಣ ಹುಗಾರ ಮಾತನಾಡಿ,
ದೇಶ ಕಂಡ ಮಹಾನ್ ವ್ಯಕ್ತಿ ಜವಾಹರಲಾಲ ನೆಹರು. ಅವರು ದೇಶದ ಅಭಿವೃದ್ಧಿಗೆ ತಮ್ಮದೆ ಆದ ಸೇವೆಯನ್ನು ಸಲ್ಲಿಸಿದ್ದಾರೆ. ಮಕ್ಕಳನ್ನು ದೇವರ ರೂಪದಲ್ಲಿ ಕಾಣುತ್ತಿದ್ದರು. ಮಕ್ಕಳ ಮೇಲಿದ್ದ ಅತಿಯಾದ ಪ್ರೀತಿಯಿಂದಾಗಿ ಇಂದು ದೇಶಾದ್ಯಾಂತ ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಚಾರಣೆ ಎಂದು ಆಚರಣೆ ಮಾಡುತ್ತಿವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸಮಾಜ ಸುಧಾರಕರ, ವಚನಕಾರರು, ಮಹಾನ್ ಸಾಧಕರ ಛದ್ಮವೇಷವನ್ನು ತೊಟ್ಟು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳಿಗೆ ನೋಟಬುಕ್ಸ್ ಹಾಗೂ ಪೆನ್ನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಸುಭಾಸ ಪವಾರ, ಶಾರದಾದೇವಿ, ಪ್ರಮೀಳಾ ನೂಲಿನ್, ವರಸಂದ್ಯಾ, ಆಸ್ಮಾ, ಜಯಶ್ರೀ, ಪ್ರಿಯಾಂಕಾ, ಸಂಧ್ಯಾ, ಗೌಸಿಯಾ ಬಾನು, ಪ್ರೇಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು