7:00 AM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು: ಮುರಿಗೆಣ್ಣ ದೇಸಾಯಿ

16/11/2024, 12:20

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕೆಲಸ ಶಾಲೆ ಮತ್ತು ಮನೆಗಳಲ್ಲಿ ಆಗಬೇಕಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು. ಅವರು ನಮ್ಮ ದೇಶದ ಆಸ್ತಿ ಎಂದು ಮುರಿಗೆಣ್ಣ ದೇಸಾಯಿ ಹೇಳಿದರು.
ಪಟ್ಟಣದ ಸ್ಪಂದನ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಜವಾಹ‌ರ್ ಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಅವರ ಭಾವಚಿತಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಕ್ಕಳ ದಿನಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬರು ದೇಶದ ಅಭಿವೃದ್ಧಿಯ ಚಿಂತನೆಯನ್ನು ಮಾಡಬೇಕು. ಭವ್ಯ ಭಾರತದ ನಿರ್ಮಾಣಕ್ಕಾಗಿ ಚಿಕ್ಕ ವಯಸ್ಸಿನಲ್ಲಿಯೆ ಮಕ್ಕಳಿಗೆ ದೇಶ ಪ್ರೇಮವನ್ನು ಬೆಳೆಸುವ ಕಾರ್ಯ ಶಿಕ್ಷಕರು ಹಾಗೂ ಪಾಲಕರಿಂದ ಆಗಬೇಕಾಗಿದೆ ಎಂದು ಹೇಳಿದರು.
ಶಾಲಾ ಹಿರಿಯ ಶಿಕ್ಷಕ ರಾಮಣ್ಣ ಹುಗಾರ ಮಾತನಾಡಿ,
ದೇಶ ಕಂಡ ಮಹಾನ್ ವ್ಯಕ್ತಿ ಜವಾಹರಲಾಲ ನೆಹರು. ಅವರು ದೇಶದ ಅಭಿವೃದ್ಧಿಗೆ ತಮ್ಮದೆ ಆದ ಸೇವೆಯನ್ನು ಸಲ್ಲಿಸಿದ್ದಾರೆ. ಮಕ್ಕಳನ್ನು ದೇವರ ರೂಪದಲ್ಲಿ ಕಾಣುತ್ತಿದ್ದರು. ಮಕ್ಕಳ ಮೇಲಿದ್ದ ಅತಿಯಾದ ಪ್ರೀತಿಯಿಂದಾಗಿ ಇಂದು ದೇಶಾದ್ಯಾಂತ ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಚಾರಣೆ ಎಂದು ಆಚರಣೆ ಮಾಡುತ್ತಿವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸಮಾಜ ಸುಧಾರಕರ, ವಚನಕಾರರು, ಮಹಾನ್ ಸಾಧಕರ ಛದ್ಮವೇಷವನ್ನು ತೊಟ್ಟು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳಿಗೆ ನೋಟಬುಕ್ಸ್ ಹಾಗೂ ಪೆನ್ನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಸುಭಾಸ ಪವಾರ, ಶಾರದಾದೇವಿ, ಪ್ರಮೀಳಾ ನೂಲಿನ್, ವರಸಂದ್ಯಾ, ಆಸ್ಮಾ, ಜಯಶ್ರೀ, ಪ್ರಿಯಾಂಕಾ, ಸಂಧ್ಯಾ, ಗೌಸಿಯಾ ಬಾನು, ಪ್ರೇಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು