10:46 AM Tuesday1 - April 2025
ಬ್ರೇಕಿಂಗ್ ನ್ಯೂಸ್
ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ…

ಇತ್ತೀಚಿನ ಸುದ್ದಿ

ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು: ಮುರಿಗೆಣ್ಣ ದೇಸಾಯಿ

16/11/2024, 12:20

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕೆಲಸ ಶಾಲೆ ಮತ್ತು ಮನೆಗಳಲ್ಲಿ ಆಗಬೇಕಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು. ಅವರು ನಮ್ಮ ದೇಶದ ಆಸ್ತಿ ಎಂದು ಮುರಿಗೆಣ್ಣ ದೇಸಾಯಿ ಹೇಳಿದರು.
ಪಟ್ಟಣದ ಸ್ಪಂದನ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಜವಾಹ‌ರ್ ಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಅವರ ಭಾವಚಿತಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಕ್ಕಳ ದಿನಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬರು ದೇಶದ ಅಭಿವೃದ್ಧಿಯ ಚಿಂತನೆಯನ್ನು ಮಾಡಬೇಕು. ಭವ್ಯ ಭಾರತದ ನಿರ್ಮಾಣಕ್ಕಾಗಿ ಚಿಕ್ಕ ವಯಸ್ಸಿನಲ್ಲಿಯೆ ಮಕ್ಕಳಿಗೆ ದೇಶ ಪ್ರೇಮವನ್ನು ಬೆಳೆಸುವ ಕಾರ್ಯ ಶಿಕ್ಷಕರು ಹಾಗೂ ಪಾಲಕರಿಂದ ಆಗಬೇಕಾಗಿದೆ ಎಂದು ಹೇಳಿದರು.
ಶಾಲಾ ಹಿರಿಯ ಶಿಕ್ಷಕ ರಾಮಣ್ಣ ಹುಗಾರ ಮಾತನಾಡಿ,
ದೇಶ ಕಂಡ ಮಹಾನ್ ವ್ಯಕ್ತಿ ಜವಾಹರಲಾಲ ನೆಹರು. ಅವರು ದೇಶದ ಅಭಿವೃದ್ಧಿಗೆ ತಮ್ಮದೆ ಆದ ಸೇವೆಯನ್ನು ಸಲ್ಲಿಸಿದ್ದಾರೆ. ಮಕ್ಕಳನ್ನು ದೇವರ ರೂಪದಲ್ಲಿ ಕಾಣುತ್ತಿದ್ದರು. ಮಕ್ಕಳ ಮೇಲಿದ್ದ ಅತಿಯಾದ ಪ್ರೀತಿಯಿಂದಾಗಿ ಇಂದು ದೇಶಾದ್ಯಾಂತ ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಚಾರಣೆ ಎಂದು ಆಚರಣೆ ಮಾಡುತ್ತಿವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸಮಾಜ ಸುಧಾರಕರ, ವಚನಕಾರರು, ಮಹಾನ್ ಸಾಧಕರ ಛದ್ಮವೇಷವನ್ನು ತೊಟ್ಟು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳಿಗೆ ನೋಟಬುಕ್ಸ್ ಹಾಗೂ ಪೆನ್ನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಸುಭಾಸ ಪವಾರ, ಶಾರದಾದೇವಿ, ಪ್ರಮೀಳಾ ನೂಲಿನ್, ವರಸಂದ್ಯಾ, ಆಸ್ಮಾ, ಜಯಶ್ರೀ, ಪ್ರಿಯಾಂಕಾ, ಸಂಧ್ಯಾ, ಗೌಸಿಯಾ ಬಾನು, ಪ್ರೇಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು