12:05 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು: ಮುರಿಗೆಣ್ಣ ದೇಸಾಯಿ

16/11/2024, 12:20

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕೆಲಸ ಶಾಲೆ ಮತ್ತು ಮನೆಗಳಲ್ಲಿ ಆಗಬೇಕಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು. ಅವರು ನಮ್ಮ ದೇಶದ ಆಸ್ತಿ ಎಂದು ಮುರಿಗೆಣ್ಣ ದೇಸಾಯಿ ಹೇಳಿದರು.
ಪಟ್ಟಣದ ಸ್ಪಂದನ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಜವಾಹ‌ರ್ ಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಅವರ ಭಾವಚಿತಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಕ್ಕಳ ದಿನಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬರು ದೇಶದ ಅಭಿವೃದ್ಧಿಯ ಚಿಂತನೆಯನ್ನು ಮಾಡಬೇಕು. ಭವ್ಯ ಭಾರತದ ನಿರ್ಮಾಣಕ್ಕಾಗಿ ಚಿಕ್ಕ ವಯಸ್ಸಿನಲ್ಲಿಯೆ ಮಕ್ಕಳಿಗೆ ದೇಶ ಪ್ರೇಮವನ್ನು ಬೆಳೆಸುವ ಕಾರ್ಯ ಶಿಕ್ಷಕರು ಹಾಗೂ ಪಾಲಕರಿಂದ ಆಗಬೇಕಾಗಿದೆ ಎಂದು ಹೇಳಿದರು.
ಶಾಲಾ ಹಿರಿಯ ಶಿಕ್ಷಕ ರಾಮಣ್ಣ ಹುಗಾರ ಮಾತನಾಡಿ,
ದೇಶ ಕಂಡ ಮಹಾನ್ ವ್ಯಕ್ತಿ ಜವಾಹರಲಾಲ ನೆಹರು. ಅವರು ದೇಶದ ಅಭಿವೃದ್ಧಿಗೆ ತಮ್ಮದೆ ಆದ ಸೇವೆಯನ್ನು ಸಲ್ಲಿಸಿದ್ದಾರೆ. ಮಕ್ಕಳನ್ನು ದೇವರ ರೂಪದಲ್ಲಿ ಕಾಣುತ್ತಿದ್ದರು. ಮಕ್ಕಳ ಮೇಲಿದ್ದ ಅತಿಯಾದ ಪ್ರೀತಿಯಿಂದಾಗಿ ಇಂದು ದೇಶಾದ್ಯಾಂತ ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಚಾರಣೆ ಎಂದು ಆಚರಣೆ ಮಾಡುತ್ತಿವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸಮಾಜ ಸುಧಾರಕರ, ವಚನಕಾರರು, ಮಹಾನ್ ಸಾಧಕರ ಛದ್ಮವೇಷವನ್ನು ತೊಟ್ಟು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳಿಗೆ ನೋಟಬುಕ್ಸ್ ಹಾಗೂ ಪೆನ್ನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಸುಭಾಸ ಪವಾರ, ಶಾರದಾದೇವಿ, ಪ್ರಮೀಳಾ ನೂಲಿನ್, ವರಸಂದ್ಯಾ, ಆಸ್ಮಾ, ಜಯಶ್ರೀ, ಪ್ರಿಯಾಂಕಾ, ಸಂಧ್ಯಾ, ಗೌಸಿಯಾ ಬಾನು, ಪ್ರೇಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು