2:11 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು: ಮುರಿಗೆಣ್ಣ ದೇಸಾಯಿ

16/11/2024, 12:20

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕೆಲಸ ಶಾಲೆ ಮತ್ತು ಮನೆಗಳಲ್ಲಿ ಆಗಬೇಕಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು. ಅವರು ನಮ್ಮ ದೇಶದ ಆಸ್ತಿ ಎಂದು ಮುರಿಗೆಣ್ಣ ದೇಸಾಯಿ ಹೇಳಿದರು.
ಪಟ್ಟಣದ ಸ್ಪಂದನ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಜವಾಹ‌ರ್ ಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಅವರ ಭಾವಚಿತಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಕ್ಕಳ ದಿನಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬರು ದೇಶದ ಅಭಿವೃದ್ಧಿಯ ಚಿಂತನೆಯನ್ನು ಮಾಡಬೇಕು. ಭವ್ಯ ಭಾರತದ ನಿರ್ಮಾಣಕ್ಕಾಗಿ ಚಿಕ್ಕ ವಯಸ್ಸಿನಲ್ಲಿಯೆ ಮಕ್ಕಳಿಗೆ ದೇಶ ಪ್ರೇಮವನ್ನು ಬೆಳೆಸುವ ಕಾರ್ಯ ಶಿಕ್ಷಕರು ಹಾಗೂ ಪಾಲಕರಿಂದ ಆಗಬೇಕಾಗಿದೆ ಎಂದು ಹೇಳಿದರು.
ಶಾಲಾ ಹಿರಿಯ ಶಿಕ್ಷಕ ರಾಮಣ್ಣ ಹುಗಾರ ಮಾತನಾಡಿ,
ದೇಶ ಕಂಡ ಮಹಾನ್ ವ್ಯಕ್ತಿ ಜವಾಹರಲಾಲ ನೆಹರು. ಅವರು ದೇಶದ ಅಭಿವೃದ್ಧಿಗೆ ತಮ್ಮದೆ ಆದ ಸೇವೆಯನ್ನು ಸಲ್ಲಿಸಿದ್ದಾರೆ. ಮಕ್ಕಳನ್ನು ದೇವರ ರೂಪದಲ್ಲಿ ಕಾಣುತ್ತಿದ್ದರು. ಮಕ್ಕಳ ಮೇಲಿದ್ದ ಅತಿಯಾದ ಪ್ರೀತಿಯಿಂದಾಗಿ ಇಂದು ದೇಶಾದ್ಯಾಂತ ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಚಾರಣೆ ಎಂದು ಆಚರಣೆ ಮಾಡುತ್ತಿವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸಮಾಜ ಸುಧಾರಕರ, ವಚನಕಾರರು, ಮಹಾನ್ ಸಾಧಕರ ಛದ್ಮವೇಷವನ್ನು ತೊಟ್ಟು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳಿಗೆ ನೋಟಬುಕ್ಸ್ ಹಾಗೂ ಪೆನ್ನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಸುಭಾಸ ಪವಾರ, ಶಾರದಾದೇವಿ, ಪ್ರಮೀಳಾ ನೂಲಿನ್, ವರಸಂದ್ಯಾ, ಆಸ್ಮಾ, ಜಯಶ್ರೀ, ಪ್ರಿಯಾಂಕಾ, ಸಂಧ್ಯಾ, ಗೌಸಿಯಾ ಬಾನು, ಪ್ರೇಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು