3:12 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ‌ ಖಡಕ್ ವಾರ್ನಿಂಗ್

08/05/2022, 23:36

ಬೆಂಗಳೂರು(reporterkarnataka.com): ಜಿಲ್ಲಾಧಿಕಾರಿಗಳೇ ಸದಾ ಗಡಿಯಾರದತ್ತಲೇ ಗಮನವಿಡಬೇಡಿ, ಮನಸ್ಸಿಟ್ಟು‌ ಕೆಲಸ ಮಾಡಿ._ ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ. ಇಂತಹ ಧೋರಣೆಯಿಂದ ಯಾವುದೇ ಪ್ರಯೋಜನವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಖಡಕ್ ಆಗಿ ಹೇಳಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ಕರೆದಿದ್ದ ಡಿಸಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಐದು ವರ್ಷಗಳ ಅವಧಿಯ ಚುನಾಯಿತ ಸರ್ಕಾರದ ಕೊನೆಯ ವರ್ಷವಿದು. ಜಿಲ್ಲಾ ಹಂತದಲ್ಲಿ ಡಿಸಿ, ಸಿಇಒಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಿದರೆ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯಗಳು ರೂಪುಗೊಳ್ಳುತ್ತವೆ._ ಅದಕ್ಕಿಂತಲೂ ಮುಖ್ಯವಾಗಿ ದೀನ-ದಲಿತರು, ಜನಸಾಮಾನ್ಯರ ಅಹವಾಲಿಗೆ ಸ್ಪಂದನೆ, ಜನಪರ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸಬೇಕು ಎಂದು ತಾಕೀತು ಮಾಡಿದರು.

ಗ್ರಾಮ ಒನ್ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ‌ . ಸಕಾಲ ಯೋಜನೆ ಬಗ್ಗೆ ಉದಾಸೀನತೆ ಎದ್ದು‌ಕಾಣುತ್ತಿದೆ. ಕೆಳ ಹಂತದ ಅಧಿಕಾರಿಗಳು ನೋಡಿಲ್ಲ, ಮಾಡಿಲ್ಲ ಎಂಬ ಸಬೂಬು ಕೇಳುವುದಿಲ್ಲ. ಸಮಯದ ಪರಿವೆಯಿಲ್ಲದೆ ಕೆಲಸ ಮಾಡಿ, ನಿಮಗಾಗದಿದ್ದರೆ ನಿಮ್ಮ ಜಾಗಕ್ಕೆ ಮತ್ತೊಬ್ಬರು ಬರುತ್ತಾರೆ ಹುಷಾರ್ ಎಂದು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು