5:14 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ‌ ಖಡಕ್ ವಾರ್ನಿಂಗ್

08/05/2022, 23:36

ಬೆಂಗಳೂರು(reporterkarnataka.com): ಜಿಲ್ಲಾಧಿಕಾರಿಗಳೇ ಸದಾ ಗಡಿಯಾರದತ್ತಲೇ ಗಮನವಿಡಬೇಡಿ, ಮನಸ್ಸಿಟ್ಟು‌ ಕೆಲಸ ಮಾಡಿ._ ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ. ಇಂತಹ ಧೋರಣೆಯಿಂದ ಯಾವುದೇ ಪ್ರಯೋಜನವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಖಡಕ್ ಆಗಿ ಹೇಳಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ಕರೆದಿದ್ದ ಡಿಸಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಐದು ವರ್ಷಗಳ ಅವಧಿಯ ಚುನಾಯಿತ ಸರ್ಕಾರದ ಕೊನೆಯ ವರ್ಷವಿದು. ಜಿಲ್ಲಾ ಹಂತದಲ್ಲಿ ಡಿಸಿ, ಸಿಇಒಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಿದರೆ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯಗಳು ರೂಪುಗೊಳ್ಳುತ್ತವೆ._ ಅದಕ್ಕಿಂತಲೂ ಮುಖ್ಯವಾಗಿ ದೀನ-ದಲಿತರು, ಜನಸಾಮಾನ್ಯರ ಅಹವಾಲಿಗೆ ಸ್ಪಂದನೆ, ಜನಪರ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸಬೇಕು ಎಂದು ತಾಕೀತು ಮಾಡಿದರು.

ಗ್ರಾಮ ಒನ್ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ‌ . ಸಕಾಲ ಯೋಜನೆ ಬಗ್ಗೆ ಉದಾಸೀನತೆ ಎದ್ದು‌ಕಾಣುತ್ತಿದೆ. ಕೆಳ ಹಂತದ ಅಧಿಕಾರಿಗಳು ನೋಡಿಲ್ಲ, ಮಾಡಿಲ್ಲ ಎಂಬ ಸಬೂಬು ಕೇಳುವುದಿಲ್ಲ. ಸಮಯದ ಪರಿವೆಯಿಲ್ಲದೆ ಕೆಲಸ ಮಾಡಿ, ನಿಮಗಾಗದಿದ್ದರೆ ನಿಮ್ಮ ಜಾಗಕ್ಕೆ ಮತ್ತೊಬ್ಬರು ಬರುತ್ತಾರೆ ಹುಷಾರ್ ಎಂದು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು