11:29 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ‌ ಖಡಕ್ ವಾರ್ನಿಂಗ್

08/05/2022, 23:36

ಬೆಂಗಳೂರು(reporterkarnataka.com): ಜಿಲ್ಲಾಧಿಕಾರಿಗಳೇ ಸದಾ ಗಡಿಯಾರದತ್ತಲೇ ಗಮನವಿಡಬೇಡಿ, ಮನಸ್ಸಿಟ್ಟು‌ ಕೆಲಸ ಮಾಡಿ._ ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ. ಇಂತಹ ಧೋರಣೆಯಿಂದ ಯಾವುದೇ ಪ್ರಯೋಜನವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಖಡಕ್ ಆಗಿ ಹೇಳಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ಕರೆದಿದ್ದ ಡಿಸಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಐದು ವರ್ಷಗಳ ಅವಧಿಯ ಚುನಾಯಿತ ಸರ್ಕಾರದ ಕೊನೆಯ ವರ್ಷವಿದು. ಜಿಲ್ಲಾ ಹಂತದಲ್ಲಿ ಡಿಸಿ, ಸಿಇಒಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಿದರೆ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯಗಳು ರೂಪುಗೊಳ್ಳುತ್ತವೆ._ ಅದಕ್ಕಿಂತಲೂ ಮುಖ್ಯವಾಗಿ ದೀನ-ದಲಿತರು, ಜನಸಾಮಾನ್ಯರ ಅಹವಾಲಿಗೆ ಸ್ಪಂದನೆ, ಜನಪರ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸಬೇಕು ಎಂದು ತಾಕೀತು ಮಾಡಿದರು.

ಗ್ರಾಮ ಒನ್ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ‌ . ಸಕಾಲ ಯೋಜನೆ ಬಗ್ಗೆ ಉದಾಸೀನತೆ ಎದ್ದು‌ಕಾಣುತ್ತಿದೆ. ಕೆಳ ಹಂತದ ಅಧಿಕಾರಿಗಳು ನೋಡಿಲ್ಲ, ಮಾಡಿಲ್ಲ ಎಂಬ ಸಬೂಬು ಕೇಳುವುದಿಲ್ಲ. ಸಮಯದ ಪರಿವೆಯಿಲ್ಲದೆ ಕೆಲಸ ಮಾಡಿ, ನಿಮಗಾಗದಿದ್ದರೆ ನಿಮ್ಮ ಜಾಗಕ್ಕೆ ಮತ್ತೊಬ್ಬರು ಬರುತ್ತಾರೆ ಹುಷಾರ್ ಎಂದು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು