5:35 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಮಳಲಿ ಮಸೀದಿ ವಿವಾದ: ವಿಚಾರಣೆ ಜೂ.6 ಕ್ಕೆ ಮುಂದೂಡಿದ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ

02/06/2022, 10:43

ಮಂಗಳೂರು(reporterkarnataka com): ಮಳಲಿಯ ಮಸೀದಿ ನವೀಕರಣ ವೇಳೆ ದೇವಾಲಯ ಮಾದರಿ ಪತ್ತೆಯಾಗಿವೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜೂ.6ಕ್ಕೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮುಂದೂಡಿದೆ.

ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ಈ ವಿಚಾರಣೆ ಆರಂಭವಾಗಿದ್ದು, ಬುಧವಾರವೂ ಮುಂದುವರಿಯಿತು. ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲೂ ಉತ್ಖನನಕ್ಕೆ ಆದೇಶ ನೀಡಬೇಕು ಎಂದು ವಿಶ್ವ ಹಿಂದು ಪರಿಷತ್ ಮನವಿ ಮಾಡಿದೆ. ಆದರೆ ವಿಹಿಂಪ ಅರ್ಜಿಯನ್ನು ವಜಾಗೊಳಿಸಬೇಕು ಎನ್ನುವುದು ಮಸೀದಿ ಆಡಳಿತ ಮಂಡಳಿ ಪರ ವಾದ ಮಂಡಿಸಲಾಗಿದೆ.

ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲೂ ಸರ್ವೇ ಮತ್ತು ತನಿಖಾ ಆಯೋಗ ನೇಮಕ ಮಾಡುವಂತೆ ವಿಹಿಂಪ ಪರ ವಕೀಲ ಚಿದಾನಂದ ಕೆದಿಲಾಯ ಮಂಗಳವಾರ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಬುಧವಾರ ಮುಂದುವರಿದ ವಿಚಾರಣೆಯಲ್ಲಿ ಪ್ರತಿವಾದ ಮಂಡನೆ ಮಾಡಿದ ಮಸೀದಿ ಆಡಳಿತ ಮಂಡಳಿ ಪರ ವಕೀಲರು, ಮಳಲಿ ಮಸೀದಿಗೆ ನೂರಾರು ವರ್ಷಗಳ ಇತಿಹಾಸವಿದೆ. ಇದೇ ಜಾಗದಲ್ಲಿ ದಫನ ಭೂಮಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವುದಕ್ಕೆ ದಾಖಲೆಗಳಿವೆ. ಮೇಲಾಗಿ ಇದು ವಕ್ಫ್ ಆಸ್ತಿಯಾಗಿ ಸರಕಾರಿ ದಾಖಲೆಗಳಲ್ಲೂ ಉಲ್ಲೇಖವಾಗಿದೆ. ಗ್ರಾಮ ಪಂಚಾಯತ್ ಅನುಮತಿ ಪಡೆದೇ ನವೀಕರಣ ಮಾಡಲು ತೊಡಗಿದ್ದಾರೆ. ಮಸೀದಿ ಇತಿಹಾಸಕ್ಕೆ ಪೂರಕ ದಾಖಲೆಗಳು ಇರುವುದರಿಂದ ವಿಹಿಂಪದ ಸರ್ವೇ ಮನವಿ ತಿರಸ್ಕರಿಸಬೇಕು ಎಂದು ವಾದಿಸಿದರು.

ಈ ಮಸೀದಿ ವಿಚಾರವನ್ನು ಜ್ಞಾನವಾಪಿ ಪ್ರಕರಣಕ್ಕಾಗಲೀ, ಅಯೋಧ್ಯೆಗಾಗಲೀ ಹೋಲಿಕೆ ಮಾಡುವುದು ಸರಿಯಲ್ಲ ಎಂದು ವಾದಿಸಿದ

ವಕೀಲರು, ಅಯೋಧ್ಯೆ ವಿಚಾರದಲ್ಲಿ ರಾಮನ ಜನ್ಮಸ್ಥಾನದ ವಿಚಾರ ಇತ್ತು. ಆದರೆ ಮಳಲಿಯಲ್ಲಿ ಅಂತಹ ಯಾವ ವಿಚಾರವೂ ಇಲ್ಲ. ಮಳಲಿಯಲ್ಲಿ ಯಾವ ದೇವರಿದ್ದರು, ಅದರ ಇತಿಹಾಸ ಏನು ಎಂಬ ಬಗ್ಗೆ ಅರ್ಜಿದಾರರು ಸಾಕ್ಷ್ಯ ನೀಡಿಲ್ಲ. ಆದರೆ ಅಲ್ಲಿ ೭೦೦ ವರ್ಷಗಳಿಂದ ಮಸೀದಿ ಇತ್ತು ಎನ್ನುವುದಕ್ಕೆ ದಾಖಲೆ ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಮಸೀದಿ ಆಡಳಿತ ಮಂಡಳಿ ಪರ ವಕೀಲರ ವಾದಕ್ಕೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ ವಿಹಿಂಪ ಪರ ವಕೀಲರು, ಇಸ್ಲಾಂ ನಿಯಮಗಳ ಪ್ರಕಾರ ನಮಾಜ್‌ನ್ನು ಎಲ್ಲಿ ಬೇಕಾದರೂ ಮಾಡಬಹುದು. ನಿಗದಿತ ಜಾಗದಲ್ಲೇ ಮಾಡಬೇಕೆಂದಿಲ್ಲ. ಹಾಗಾಗಿ ವಿವಾದಿತ ಜಾಗದ ಸರ್ವೇ ಮಾಡಲು ಕೋರ್ಟ್ ಆದೇಶ ಮಾಡಬೇಕು ಎಂದು ಮನವಿ ಮಾಡಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಶರು ಮುಂದಿನ ವಿಚಾರಣೆಯನ್ನು ಜೂ.6ಕ್ಕೆ ನಿಗದಿಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು