11:55 PM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಮಳಲಿ ಮಸೀದಿ ವಿವಾದ: ವಿಚಾರಣೆ ಜೂ.6 ಕ್ಕೆ ಮುಂದೂಡಿದ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ

02/06/2022, 10:43

ಮಂಗಳೂರು(reporterkarnataka com): ಮಳಲಿಯ ಮಸೀದಿ ನವೀಕರಣ ವೇಳೆ ದೇವಾಲಯ ಮಾದರಿ ಪತ್ತೆಯಾಗಿವೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜೂ.6ಕ್ಕೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮುಂದೂಡಿದೆ.

ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ಈ ವಿಚಾರಣೆ ಆರಂಭವಾಗಿದ್ದು, ಬುಧವಾರವೂ ಮುಂದುವರಿಯಿತು. ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲೂ ಉತ್ಖನನಕ್ಕೆ ಆದೇಶ ನೀಡಬೇಕು ಎಂದು ವಿಶ್ವ ಹಿಂದು ಪರಿಷತ್ ಮನವಿ ಮಾಡಿದೆ. ಆದರೆ ವಿಹಿಂಪ ಅರ್ಜಿಯನ್ನು ವಜಾಗೊಳಿಸಬೇಕು ಎನ್ನುವುದು ಮಸೀದಿ ಆಡಳಿತ ಮಂಡಳಿ ಪರ ವಾದ ಮಂಡಿಸಲಾಗಿದೆ.

ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲೂ ಸರ್ವೇ ಮತ್ತು ತನಿಖಾ ಆಯೋಗ ನೇಮಕ ಮಾಡುವಂತೆ ವಿಹಿಂಪ ಪರ ವಕೀಲ ಚಿದಾನಂದ ಕೆದಿಲಾಯ ಮಂಗಳವಾರ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಬುಧವಾರ ಮುಂದುವರಿದ ವಿಚಾರಣೆಯಲ್ಲಿ ಪ್ರತಿವಾದ ಮಂಡನೆ ಮಾಡಿದ ಮಸೀದಿ ಆಡಳಿತ ಮಂಡಳಿ ಪರ ವಕೀಲರು, ಮಳಲಿ ಮಸೀದಿಗೆ ನೂರಾರು ವರ್ಷಗಳ ಇತಿಹಾಸವಿದೆ. ಇದೇ ಜಾಗದಲ್ಲಿ ದಫನ ಭೂಮಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವುದಕ್ಕೆ ದಾಖಲೆಗಳಿವೆ. ಮೇಲಾಗಿ ಇದು ವಕ್ಫ್ ಆಸ್ತಿಯಾಗಿ ಸರಕಾರಿ ದಾಖಲೆಗಳಲ್ಲೂ ಉಲ್ಲೇಖವಾಗಿದೆ. ಗ್ರಾಮ ಪಂಚಾಯತ್ ಅನುಮತಿ ಪಡೆದೇ ನವೀಕರಣ ಮಾಡಲು ತೊಡಗಿದ್ದಾರೆ. ಮಸೀದಿ ಇತಿಹಾಸಕ್ಕೆ ಪೂರಕ ದಾಖಲೆಗಳು ಇರುವುದರಿಂದ ವಿಹಿಂಪದ ಸರ್ವೇ ಮನವಿ ತಿರಸ್ಕರಿಸಬೇಕು ಎಂದು ವಾದಿಸಿದರು.

ಈ ಮಸೀದಿ ವಿಚಾರವನ್ನು ಜ್ಞಾನವಾಪಿ ಪ್ರಕರಣಕ್ಕಾಗಲೀ, ಅಯೋಧ್ಯೆಗಾಗಲೀ ಹೋಲಿಕೆ ಮಾಡುವುದು ಸರಿಯಲ್ಲ ಎಂದು ವಾದಿಸಿದ

ವಕೀಲರು, ಅಯೋಧ್ಯೆ ವಿಚಾರದಲ್ಲಿ ರಾಮನ ಜನ್ಮಸ್ಥಾನದ ವಿಚಾರ ಇತ್ತು. ಆದರೆ ಮಳಲಿಯಲ್ಲಿ ಅಂತಹ ಯಾವ ವಿಚಾರವೂ ಇಲ್ಲ. ಮಳಲಿಯಲ್ಲಿ ಯಾವ ದೇವರಿದ್ದರು, ಅದರ ಇತಿಹಾಸ ಏನು ಎಂಬ ಬಗ್ಗೆ ಅರ್ಜಿದಾರರು ಸಾಕ್ಷ್ಯ ನೀಡಿಲ್ಲ. ಆದರೆ ಅಲ್ಲಿ ೭೦೦ ವರ್ಷಗಳಿಂದ ಮಸೀದಿ ಇತ್ತು ಎನ್ನುವುದಕ್ಕೆ ದಾಖಲೆ ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಮಸೀದಿ ಆಡಳಿತ ಮಂಡಳಿ ಪರ ವಕೀಲರ ವಾದಕ್ಕೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ ವಿಹಿಂಪ ಪರ ವಕೀಲರು, ಇಸ್ಲಾಂ ನಿಯಮಗಳ ಪ್ರಕಾರ ನಮಾಜ್‌ನ್ನು ಎಲ್ಲಿ ಬೇಕಾದರೂ ಮಾಡಬಹುದು. ನಿಗದಿತ ಜಾಗದಲ್ಲೇ ಮಾಡಬೇಕೆಂದಿಲ್ಲ. ಹಾಗಾಗಿ ವಿವಾದಿತ ಜಾಗದ ಸರ್ವೇ ಮಾಡಲು ಕೋರ್ಟ್ ಆದೇಶ ಮಾಡಬೇಕು ಎಂದು ಮನವಿ ಮಾಡಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಶರು ಮುಂದಿನ ವಿಚಾರಣೆಯನ್ನು ಜೂ.6ಕ್ಕೆ ನಿಗದಿಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು