6:38 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮಲಾರ್ ಪಲ್ಲಿಯಬ್ಬ ಕೊಲೆ ಪ್ರಕರಣ: ಎಲ್ಲ 5 ಮಂದಿ ಆರೋಪಿಗಳು ದೋಷಿಗಳು; ಶಿಕ್ಷೆಯ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲಯ

01/03/2023, 21:25

ಮಂಗಳೂರು(reporterkarnataka.com): ಪಾವೂರು ಸಮೀಪದ ಮಲಾರ್ ನಲ್ಲಿ ವೃದ್ಧರೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 5 ಮಂದಿ ಆರೋಪಿಗಳನ್ನು ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕಟಿಸಿದೆ.

ನ್ಯಾಯಾಧೀಶ ಬಸಪ್ಪ ಬಾಳಪ್ಪ ಜಕಾತಿ, ಶಿಕ್ಷೆಯ ಪ್ರಮಾಣವನ್ನು 2023ರ ಮಾರ್ಚ್ 3ನೇ ತಾರೀಕಿಗೆ ಕಾಯ್ದಿರಿಸಿದ್ದಾರೆ.
ಪಲ್ಲಿಯಬ್ಬ ಎಂಬವರನ್ನು ಮಲಾರ್ ಎಂಬಲ್ಲಿ ಹಣಕ್ಕಾಗಿ ಕತ್ತು ಹಿಸುಕಿ ಕೊಲ್ಲಲಾಗಿತ್ತು ಮತ್ತು ಕುಟುಂಬಸ್ಥರು ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಇದರ ಆಧಾರದಲ್ಲಿ ಪೋಲೀಸರು ತನಿಖೆ ನಡೆಸಿದಾಗ ಕೊಲೆ ಎಂದು ಸಾಬೀತಾಗಿತ್ತು.

ಮಲಾ‌ರ್ ಅಕ್ಷರ ನಗರ ನಿವಾಸಿ ಹಂಝ ಅಬ್ಬಾಸ್ (44), ಮಲಾರ್ ಅರಸ್ತಾನ ಸೈಟ್ ನಿವಾಸಿ ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಹಾಗೂ ಅಥಾವುಲ್ಲ ಯಾನೆ ಅಲ್ತಾಫ್ ಅಪರಾಧಿಗಳು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದ ವಿವರ: ಪಾವೂರು ಗ್ರಾಮದ ಮಲಾರ್‌ನಿಂದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಪಲ್ಲಿಯಬ್ಬ ಎಂಬವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಇವರನ್ನು ವ್ಯವಸ್ಥಿತವಾಗಿ ಹತ್ಯೆಗೈದು ಹೂತು ಹಾಕಲಾಗಿತ್ತು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು.
ಈ ಬಗ್ಗೆ ಕೊಣಾಜೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು