12:21 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಳೆ ಬಂದ್ರೆ ನರಕಯಾತನೆ ಅನುಭವಿಸುವ  ಜನರು !: ಕ್ಯಾರೆ ಎನ್ನದ ಅಧಿಕಾರಿಗಳು; ಜನರ ಗೋಳು ಕೇಳುವವರ್ಯಾರು?

23/07/2021, 08:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಬಳಗನೂರು ಸಮೀಪದ ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದ್ರೆ ಇಡೀ ವಾರ್ಡಿನ ಜನರಿಗೆ ನದಿ ದಾಟುವಂತ ಪರಿಸ್ಥಿತಿ ಎದುರಾಗುತ್ತದೆ.

ಗ್ರಾಮಗಳ ಸುರಕ್ಷತೆಗಾಗಿ ಸರಕಾರದಿಂದ ಸಾಕಷ್ಟು ಯೋಜನೆಗಳಿದ್ದರೂ ಅದು ಹೇಗೆ ಬಳಕೆಯಾಗುತ್ತಿಲ್ಲ ಎನ್ನುವುದಕ್ಕೆ ಇದು ಸಣ್ಣ ಉದಾಹರಣೆಯಾಗಿದೆ.


ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದರೆ ವೃದ್ಧರು, ಗರ್ಭಿಣಿಯರು , ಮಕ್ಕಳು ನರಕಯಾತನೆ ಅನುಭವಿಸುತ್ತಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಇದೆಲ್ಲ ಗೊತ್ತಿದ್ದರೂ ಗೊತ್ತಿಲ್ಲದಂತೆ ಸುಮ್ಮನಾಗಿದ್ದಾರೆ. ಜನರ ಕೂಗು ಕೇಳುವವರ್ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಗೌಡನಬಾವಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರು ಇದರ ಬಗ್ಗೆ ಗಮನಹರಿಸುವ ಅಗತ್ಯವಿದೆ. ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಸ್ಥಳೀಯ ಗ್ರಾಮದ ಸಮಸ್ಯೆಯನ್ನು ಬಗೆಹರಿಸುವ ಮೂಲಕ ನರಕಯಾತನೆ ಅನುಭವಿಸುತ್ತಿರುವ ತಿಪ್ಪಯ್ಯ ಸ್ವಾಮಿ ಸಾಲಿಮಠ ಅವರ ವಾರ್ಡಿನ ನೀರನ್ನು ಹೋಗುವುದಕ್ಕೆ ಅನುಕೂಲ ಮಾಡಿ ಆ ವಾರ್ಡಿನ ಗ್ರಾಮದ ಜನರಿಗೆ ದಾರಿದೀಪ ವಾಗಬೇಕೆಂದು ವಾರ್ಡಿನ ಜನರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಇದನ್ನು ಯಾವಾಗ ಕಾರ್ಯರೂಪಕ್ಕೆ ತರುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು