12:05 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಳೆ ಬಂದ್ರೆ ನರಕಯಾತನೆ ಅನುಭವಿಸುವ  ಜನರು !: ಕ್ಯಾರೆ ಎನ್ನದ ಅಧಿಕಾರಿಗಳು; ಜನರ ಗೋಳು ಕೇಳುವವರ್ಯಾರು?

23/07/2021, 08:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಬಳಗನೂರು ಸಮೀಪದ ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದ್ರೆ ಇಡೀ ವಾರ್ಡಿನ ಜನರಿಗೆ ನದಿ ದಾಟುವಂತ ಪರಿಸ್ಥಿತಿ ಎದುರಾಗುತ್ತದೆ.

ಗ್ರಾಮಗಳ ಸುರಕ್ಷತೆಗಾಗಿ ಸರಕಾರದಿಂದ ಸಾಕಷ್ಟು ಯೋಜನೆಗಳಿದ್ದರೂ ಅದು ಹೇಗೆ ಬಳಕೆಯಾಗುತ್ತಿಲ್ಲ ಎನ್ನುವುದಕ್ಕೆ ಇದು ಸಣ್ಣ ಉದಾಹರಣೆಯಾಗಿದೆ.


ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದರೆ ವೃದ್ಧರು, ಗರ್ಭಿಣಿಯರು , ಮಕ್ಕಳು ನರಕಯಾತನೆ ಅನುಭವಿಸುತ್ತಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಇದೆಲ್ಲ ಗೊತ್ತಿದ್ದರೂ ಗೊತ್ತಿಲ್ಲದಂತೆ ಸುಮ್ಮನಾಗಿದ್ದಾರೆ. ಜನರ ಕೂಗು ಕೇಳುವವರ್ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಗೌಡನಬಾವಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರು ಇದರ ಬಗ್ಗೆ ಗಮನಹರಿಸುವ ಅಗತ್ಯವಿದೆ. ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಸ್ಥಳೀಯ ಗ್ರಾಮದ ಸಮಸ್ಯೆಯನ್ನು ಬಗೆಹರಿಸುವ ಮೂಲಕ ನರಕಯಾತನೆ ಅನುಭವಿಸುತ್ತಿರುವ ತಿಪ್ಪಯ್ಯ ಸ್ವಾಮಿ ಸಾಲಿಮಠ ಅವರ ವಾರ್ಡಿನ ನೀರನ್ನು ಹೋಗುವುದಕ್ಕೆ ಅನುಕೂಲ ಮಾಡಿ ಆ ವಾರ್ಡಿನ ಗ್ರಾಮದ ಜನರಿಗೆ ದಾರಿದೀಪ ವಾಗಬೇಕೆಂದು ವಾರ್ಡಿನ ಜನರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಇದನ್ನು ಯಾವಾಗ ಕಾರ್ಯರೂಪಕ್ಕೆ ತರುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು