4:36 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಮಳೆ ಕಡಿಮೆಯಾದರೂ ನಿಲ್ಲದ ಅನಾಹುತ; ಭೂಮಿಯ ತೇವಾಂಶ ಹೆಚ್ಚಾಗಿ ಆತಂಕದಲ್ಲಿ ಮಲೆನಾಡು ಜನರು

14/08/2022, 09:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದರೂ ಅನಾಹುತಗಳು ಅಬ್ಬರ ಕಡಿಮೆಯಾಗುತ್ತಿಲ್ಲ. ಕಳೆದ 15 ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಭೂಮಿಯ ತೇವಾಂಶ ಹೆಚ್ಚಾಗಿ ಬೆಟ್ಟ-ಗುಡ್ಡಗಳು ಕುಸಿಯುವ ಪ್ರಮಾಣ ಕೂಡ ಹೆಚ್ಚಾಗಿದೆ. ಮಳೆ ಕಡಿಮೆಯಾಗಿ ಎರಡು ದಿನವಾದರೂ ಬೆಟ್ಟ-ಗುಡ್ಡಗಳು ಕುಸಿಯುವುದು ಮಾತ್ರ ನಿಂತಿಲ್ಲ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಗ್ಗಸಗೂಡು ಗ್ರಾಮದ ರವಿಗೌಡ ಎಂಬುವರ ಮನೆ ಮುಂದಿನ ತೋಟದಲ್ಲಿ ಮಣ್ಣು ಕುಸಿದಿದೆ. ಭಾರೀ ಪ್ರಮಾಣದಲಿ ಮಣ್ಣು ಕುಸಿದ ಪರಿಣಾಮ ತೋಟದಲ್ಲಿದ್ದ ಬಾವಿಯೂ ಕೂಡ ಮುಚ್ಚಿ ಹೋಗಿದೆ. ಭೂಮಿಯ ತೇವಾಂಶ ಹೆಚ್ಚಾಗಿ ತೋಟದಲ್ಲಿನ ಗುಡ್ಡ ಜರಿಯುವ ವೇಳೆ ಮನೆಯ ಗೋಡೆ ಕೂಡ ಬಿರುಕು ಬಿಟ್ಟಿದೆ. ಮನೆಯ ಮೆಟ್ಟಿಲುಗಳು ಕೂಡ ಬಿರುಕು ಬಿಟ್ಟಿವೆ. ಮನೆಯ ಗೋಡೆಗಳು ಹಾಗೂ ಮೆಟ್ಟಿಲುಗಳು ಬಿರುಕುಬಿಟ್ಟಿರುವುದರಿಂದ ಮನೆಯವರು ಕೂಡ ಆತಂಕದಿಂದಿದ್ದಾರೆ. ಮನೆಯನ್ನ ಬಿಟ್ಟು ಸಂಬಂಧಿಗಳ ಮನೆಯಲ್ಲಿ ವಾಸವಿದ್ದಾರೆ. ಮಲೆನಾಡಲ್ಲಿ ಈ ವರ್ಷ ಮಳೆ ಪ್ರಮಾಣ ಹೆಚ್ಚಾಗಿದೆ. ಮಲೆನಾಡಲ್ಲಿ ಬೀಳುವ ವಾರ್ಷಿಕ ಸರಾಸರಿ ಮಳೆಗಿಂತ ಈ ವರ್ಷ ಹೆಚ್ಚು ಮಳೆಯಾಗಿದೆ.


ಜನವರಿಯಿಂದಲೂ ಆಗಿದಾಂಗ್ಗೆ ಮಳೆ ಸುರಿಯುತ್ತಿದ್ದು ಭೂಮಿಯ ತೇವಾಂಶ ಹೆಚ್ಚಾಗಿದೆ. ಇದರಿಂದ ಮಳೆ ನಿಂತರೂ ಅನಾಹುಗಳು ನಿಲ್ಲುತ್ತಿಲ್ಲ ಎಂದು ಸ್ಥಳಿಯರೇ ಭಾವಿಸಿದ್ದಾರೆ. 2018ರಿಂದಲೂ ಪ್ರತಿ ಮಳೆಗಾಲದಲ್ಲೂ ಮಲೆನಾಡಲ್ಲಿ ಮಳೆ ಅಬ್ಬರ ಜೋರಾಗಿದೆ. ಈ ವರ್ಷವೂ ಅದೇ ರೀತಿ ಮಳೆಯಾಗಿದೆ. ಜೊತೆಗೆ ಇತ್ತೀಚೆಗೆ ಗಾಳಿ ಅಬ್ಬರ ಕೂಡ ಅಷ್ಟೆ ವೇಗವಾಗಿರುವುದರಿಂದ ಅನಾಹುತಗಳು ಪಟ್ಟಿಯೂ ದೊಡ್ಡದ್ದಾಗುತ್ತಿದೆ. ಮಳೆ ನಿಂತ ಮೇಲೂ ಆಗುತ್ತಿರುವ ಅನಾಹುತ ನೋಡಿ ಮಲೆನಾಡಿಗರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು