3:01 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಳೆ ಕಡಿಮೆಯಾದರೂ ನಿಲ್ಲದ ಅನಾಹುತ; ಭೂಮಿಯ ತೇವಾಂಶ ಹೆಚ್ಚಾಗಿ ಆತಂಕದಲ್ಲಿ ಮಲೆನಾಡು ಜನರು

14/08/2022, 09:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದರೂ ಅನಾಹುತಗಳು ಅಬ್ಬರ ಕಡಿಮೆಯಾಗುತ್ತಿಲ್ಲ. ಕಳೆದ 15 ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಭೂಮಿಯ ತೇವಾಂಶ ಹೆಚ್ಚಾಗಿ ಬೆಟ್ಟ-ಗುಡ್ಡಗಳು ಕುಸಿಯುವ ಪ್ರಮಾಣ ಕೂಡ ಹೆಚ್ಚಾಗಿದೆ. ಮಳೆ ಕಡಿಮೆಯಾಗಿ ಎರಡು ದಿನವಾದರೂ ಬೆಟ್ಟ-ಗುಡ್ಡಗಳು ಕುಸಿಯುವುದು ಮಾತ್ರ ನಿಂತಿಲ್ಲ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಗ್ಗಸಗೂಡು ಗ್ರಾಮದ ರವಿಗೌಡ ಎಂಬುವರ ಮನೆ ಮುಂದಿನ ತೋಟದಲ್ಲಿ ಮಣ್ಣು ಕುಸಿದಿದೆ. ಭಾರೀ ಪ್ರಮಾಣದಲಿ ಮಣ್ಣು ಕುಸಿದ ಪರಿಣಾಮ ತೋಟದಲ್ಲಿದ್ದ ಬಾವಿಯೂ ಕೂಡ ಮುಚ್ಚಿ ಹೋಗಿದೆ. ಭೂಮಿಯ ತೇವಾಂಶ ಹೆಚ್ಚಾಗಿ ತೋಟದಲ್ಲಿನ ಗುಡ್ಡ ಜರಿಯುವ ವೇಳೆ ಮನೆಯ ಗೋಡೆ ಕೂಡ ಬಿರುಕು ಬಿಟ್ಟಿದೆ. ಮನೆಯ ಮೆಟ್ಟಿಲುಗಳು ಕೂಡ ಬಿರುಕು ಬಿಟ್ಟಿವೆ. ಮನೆಯ ಗೋಡೆಗಳು ಹಾಗೂ ಮೆಟ್ಟಿಲುಗಳು ಬಿರುಕುಬಿಟ್ಟಿರುವುದರಿಂದ ಮನೆಯವರು ಕೂಡ ಆತಂಕದಿಂದಿದ್ದಾರೆ. ಮನೆಯನ್ನ ಬಿಟ್ಟು ಸಂಬಂಧಿಗಳ ಮನೆಯಲ್ಲಿ ವಾಸವಿದ್ದಾರೆ. ಮಲೆನಾಡಲ್ಲಿ ಈ ವರ್ಷ ಮಳೆ ಪ್ರಮಾಣ ಹೆಚ್ಚಾಗಿದೆ. ಮಲೆನಾಡಲ್ಲಿ ಬೀಳುವ ವಾರ್ಷಿಕ ಸರಾಸರಿ ಮಳೆಗಿಂತ ಈ ವರ್ಷ ಹೆಚ್ಚು ಮಳೆಯಾಗಿದೆ.


ಜನವರಿಯಿಂದಲೂ ಆಗಿದಾಂಗ್ಗೆ ಮಳೆ ಸುರಿಯುತ್ತಿದ್ದು ಭೂಮಿಯ ತೇವಾಂಶ ಹೆಚ್ಚಾಗಿದೆ. ಇದರಿಂದ ಮಳೆ ನಿಂತರೂ ಅನಾಹುಗಳು ನಿಲ್ಲುತ್ತಿಲ್ಲ ಎಂದು ಸ್ಥಳಿಯರೇ ಭಾವಿಸಿದ್ದಾರೆ. 2018ರಿಂದಲೂ ಪ್ರತಿ ಮಳೆಗಾಲದಲ್ಲೂ ಮಲೆನಾಡಲ್ಲಿ ಮಳೆ ಅಬ್ಬರ ಜೋರಾಗಿದೆ. ಈ ವರ್ಷವೂ ಅದೇ ರೀತಿ ಮಳೆಯಾಗಿದೆ. ಜೊತೆಗೆ ಇತ್ತೀಚೆಗೆ ಗಾಳಿ ಅಬ್ಬರ ಕೂಡ ಅಷ್ಟೆ ವೇಗವಾಗಿರುವುದರಿಂದ ಅನಾಹುತಗಳು ಪಟ್ಟಿಯೂ ದೊಡ್ಡದ್ದಾಗುತ್ತಿದೆ. ಮಳೆ ನಿಂತ ಮೇಲೂ ಆಗುತ್ತಿರುವ ಅನಾಹುತ ನೋಡಿ ಮಲೆನಾಡಿಗರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು