6:18 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮಲೆ ಮಹಾದೇಶ್ವರ ಬೆಟ್ಟಕ್ಕೆ ಮಹಿಳಾ ಭಕ್ತರ ದಂಡು: ಟ್ರಾಫಿಕ್ ಜಾಮ್; 5 ಕಿಮೀಗೂ ಹೆಚ್ಚು ಉದ್ದಕ್ಕೆ ವಾಹನಗಳ ಸಾಲು

21/06/2023, 13:45

ಶ್ರುತಿ ಹಾನಗಲ್ ಚಾಮರಾಜನಗರ

info.reporterkarnataka@gmail.com

ಸಾಮಾನ್ಯವಾಗಿ ಭಕ್ತರಿಂದ ತುಂಬಿ ತುಳುಕುತ್ತಿರುವ ಮಲೆ ಮಹಾದೇಶ್ವರ ಬೆಟ್ಟಕ್ಕೆ ಶಕ್ತಿ ಯೋಜನೆ ಅನುಷ್ಠಾನಗೊಂಡ ಬಳಿಕ ಯಾತ್ರಿಕರ ಸಂಖ್ಯೆ 4 ಪಟ್ಟು ಜಾಸ್ತಿಯಾಗಿದ್ದು, 5 ಕಿಮೀ ಉದ್ದಕ್ಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

ಮಹಿಳೆಯರಿಗೆ ಉಚಿತ ಬಸ್ ಯಾನ ಬಳಿಕ ಮಲೆ ಮಹಾದೇಶ್ವರ ಸ್ವಾಮಿಗೆ ಬೇಡಿಕೆ ಇನ್ನಷ್ಟು ಜಾಸ್ತಿಯಾಗಿದೆ. ಮಹಿಳಾ ಯಾತ್ರಾರ್ಥಿಗಳ ಸಂಖ್ಯೆ ಬಹಳಷ್ಟು ಹೆಚ್ಚಾಗಿದೆ. ಬೆಟ್ಟವೇರುವ ಪ್ರತಿಯೊಂದು ಬಸ್ಸುಗಳು ಮಹಿಳಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ. ಸರಕಾರ ಉಚಿತ ಬಸ್ ಪ್ರಯಾಣವನ್ನೇನೊ ಮಹಿಳೆಯರಿಗೆ ಕಲ್ಪಿಸಿದೆ. ಆದರೆ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಿಲ್ಲ ಎಂದು ಭಕ್ತಾಧಿಗಳು ಆಡಿಕೊಳ್ಳುತ್ತಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಿಂದ ನಿರ್ಗಮಿಸಲು ಯಾತ್ರಿಕರು ಬಸ್ಸುಗಳಿಗೆ ಮುಗಿಬೀಳುತ್ತಾರೆ. ಕಿಟಕಿ ಮೂಲಕ ಬಸ್ಸೇರುವುದು, ಚಾಲಕನ ಸೀಟು ಬಳಿಯ ಡೋರ್ ಮೂಲಕ ಬಸ್ ಹತ್ತುವ ದೃಶ್ಯಗಳು ಸಾಮಾನ್ಯವಾಗಿದೆ. ಜಗಳ, ಕಾದಾಟ, ಬೈಗಳು ಕೂಡ ಪರಸ್ಪರ ವಿನಿಮಯವಾಗುತ್ತದೆ.
ಖಾಸಗಿ ವಾಹನಗಳ,ಕಾರು ಬೈಕ್ ಸಂಖ್ಯೆಯೂ ಅತ್ಯಧಿಕವಾಗಿದೆ.
ಹನೂರು ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಈ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಣ್ಣೆತ್ತಿನ ಅಮವಾಸ್ಯೆ ವಿಶೇಷವಾಗಿ ಸಹಸ್ರಾರರು ಭಕ್ತಸಾಗರ ಹರಿದು ಬರುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು