9:38 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು 

03/12/2021, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವ ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಸುಮಾರು 2 ತಾಸಿಗೂ ಹೆಚ್ಚು ಹೊತ್ತು ಭಾರೀ ಮಳೆ ಸುರಿದಿದೆ. ಕೊಟ್ಟಿಗೆಹಾರ, ಚಾರ್ಮಾಡಿಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಏಕಾಏಕಿ ಶುರುವಾದ ಮಳೆ ಜನಜೀವನವನ್ನ ಹೈರಾಣಾಗುವಂತೆ ಮಾಡಿದೆ. 

ಮಳೆ ನೀರು ರಸ್ತೆಯಲ್ಲಿ ನದಿಯಂತೆ ಹರಿದಿದ್ದರಿಂದ ವಾಹನ ಸವಾರರು ವಾಹನ ಓಡಿಸೋದಕ್ಕೂ ಪರದಾಟ ನಡೆಸಿದ್ದಾರೆ. ಮಲೆನಾಡು ಭಾಗದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಡಿಕೆ-ಕಾಫಿ-ಮೆಣಸು ಬೆಳೆಗಾರರು ಬೆಳೆಯನ್ನ ಒಣಗಿಸಲಾಗದೆ ಕಂಗಾಲಾಗಿದ್ದರು. ಕೆಲವರು ಬೆಳೆಯನ್ನ ಕಟಾವು ಮಾಡಲಾಗದೆ ಹಾಗೇ ಬಿಟ್ಟಿದ್ದರು. ಹಲವರು ಹೆಚ್ಚಿನ ಕೂಲಿ ನೀಡಿ ಮಳೆಯಲ್ಲಿ ನೆನೆದುಕೊಂಡೇ ಕಾಫಿಯನ್ನ ಕೀಳಿಸಿದ್ದರು. ಕೆಲ ಸಣ್ಣ ಬೆಳೆಗಾರರು ತೋಟದಲ್ಲಿ ಕಸ ಹೊಡೆದು ಉದುರಿದ್ದ ಕಾಫಿಯನ್ನ ಆಯ್ದು ಮನೆಗೆ ತಂದಿದ್ದರು. ಮತ್ತಲವರು ಕಾಫಿಯನ್ನ ಗಿಡದಲ್ಲೇ ಬಿಟ್ಟಿದ್ದರು. ಕೆಲ ಹಳ್ಳಿಗರು ಕಾಫಿ-ಅಡಿಕೆಯನ್ನ ದೊಡ್ಡ-ದೊಡ್ಡ ಒಲೆಗಳನ್ನ ನಿರ್ಮಾಣ ಮಾಡಿ ಒಲೆ-ಗ್ಯಾಸ್‍ಗಳ ಮೇಳೆ ದೊಡ್ಡ ಬಾಂಡಲಿಗಳನ್ನ ಇಟ್ಟು ಕಾಫಿ-ಅಡಿಕೆಯನ್ನ ಒಣಗಿಸಿದ್ದರು. ಕಳೆದ ನಾಲ್ಕೈದು ದಿನದಿಂದ ಮಳೆ ಬಿಡುವು ನೀಡಿದ್ದ ಪರಿಣಾಮ ಬೆಳೆಗಾರರು ನಿಟ್ಟುಸಿರು ಬಿಟ್ಟು ಬೆಳೆಯನ್ನ ಒಣಗಿಸೋದಕ್ಕೆ ಮುಂದಾಗಿದ್ದರು. ಆದರೀಗ, ಮತ್ತೆ ಏಕಾಏಕಿ ಆರಂಭವಾದ ಮಳೆ ಧಾರಾಕಾರವಾಗಿ ಸುರಿದ ಪರಿಣಾಮ ಅಂಗಳದಲ್ಲಿದ್ದ ಬೆಳೆ ಮೇಲೆ ನೀರು ನುಗ್ಗಿದ್ದು ಬೆಳೆಗಾರರು ಮತ್ತೆ ಆತಂಕಕ್ಕೀಡಾಗಿದ್ದಾರೆ. ಈ ಬಾರಿ ಕಾಫಿಗೆ ಉತ್ತಮ ಬೆಲೆ ಇದೆ. ಆದರೆ, ಬೆಳೆ ಇಲ್ಲ. 50 ಕೆ.ಜಿ. ಕಾಫಿ ಮೂಟೆಗೆ 15 ರಿಂದ 17 ಸಾವಿರದವೆಗೆ ಇದೆ. ಆದರೆ, ಈ ವರ್ಷ ಬೆಳೆಯೇ ಇಲ್ಲ. ಆರಂಭದಲ್ಲಿ ಉತ್ತಮವಾಗಿದ್ದ ಫಸಲು ಮಳೆ, ಹವಾಮಾನ ವೈಪರಿತ್ಯದಿಂದ ಗಿಡದಲ್ಲಿ ಇದ್ದದ್ದಕ್ಕಿಂತ ಜಾಸ್ತಿ ಮಣ್ಣಲ್ಲಿ ಕೊಳೆದು ಗೊಬ್ಬರವಾಗಿದ್ದೇ ಹೆಚ್ಚು. ಇರೋ ಬೆಳೆಯನ್ನ ಬೆಳೆಗಾರರು ಹೋರಾಡಿ ಉಳಿಸಿಕೊಳ್ಳುತ್ತಿದ್ದಾರೆ. ಈಗ ಮತ್ತೆ ಮಳೆ ಆರಂಭವಾಗಿದ್ದು ಇರೋ ಬೆಳೆಗೂ ಮಳೆರಾಯ ಮಗ್ಗಲ ಮುಳ್ಳಾಗುತ್ತಾನಾ ಎಂದು ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು