6:42 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು 

03/12/2021, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವ ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಸುಮಾರು 2 ತಾಸಿಗೂ ಹೆಚ್ಚು ಹೊತ್ತು ಭಾರೀ ಮಳೆ ಸುರಿದಿದೆ. ಕೊಟ್ಟಿಗೆಹಾರ, ಚಾರ್ಮಾಡಿಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಏಕಾಏಕಿ ಶುರುವಾದ ಮಳೆ ಜನಜೀವನವನ್ನ ಹೈರಾಣಾಗುವಂತೆ ಮಾಡಿದೆ. 

ಮಳೆ ನೀರು ರಸ್ತೆಯಲ್ಲಿ ನದಿಯಂತೆ ಹರಿದಿದ್ದರಿಂದ ವಾಹನ ಸವಾರರು ವಾಹನ ಓಡಿಸೋದಕ್ಕೂ ಪರದಾಟ ನಡೆಸಿದ್ದಾರೆ. ಮಲೆನಾಡು ಭಾಗದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಡಿಕೆ-ಕಾಫಿ-ಮೆಣಸು ಬೆಳೆಗಾರರು ಬೆಳೆಯನ್ನ ಒಣಗಿಸಲಾಗದೆ ಕಂಗಾಲಾಗಿದ್ದರು. ಕೆಲವರು ಬೆಳೆಯನ್ನ ಕಟಾವು ಮಾಡಲಾಗದೆ ಹಾಗೇ ಬಿಟ್ಟಿದ್ದರು. ಹಲವರು ಹೆಚ್ಚಿನ ಕೂಲಿ ನೀಡಿ ಮಳೆಯಲ್ಲಿ ನೆನೆದುಕೊಂಡೇ ಕಾಫಿಯನ್ನ ಕೀಳಿಸಿದ್ದರು. ಕೆಲ ಸಣ್ಣ ಬೆಳೆಗಾರರು ತೋಟದಲ್ಲಿ ಕಸ ಹೊಡೆದು ಉದುರಿದ್ದ ಕಾಫಿಯನ್ನ ಆಯ್ದು ಮನೆಗೆ ತಂದಿದ್ದರು. ಮತ್ತಲವರು ಕಾಫಿಯನ್ನ ಗಿಡದಲ್ಲೇ ಬಿಟ್ಟಿದ್ದರು. ಕೆಲ ಹಳ್ಳಿಗರು ಕಾಫಿ-ಅಡಿಕೆಯನ್ನ ದೊಡ್ಡ-ದೊಡ್ಡ ಒಲೆಗಳನ್ನ ನಿರ್ಮಾಣ ಮಾಡಿ ಒಲೆ-ಗ್ಯಾಸ್‍ಗಳ ಮೇಳೆ ದೊಡ್ಡ ಬಾಂಡಲಿಗಳನ್ನ ಇಟ್ಟು ಕಾಫಿ-ಅಡಿಕೆಯನ್ನ ಒಣಗಿಸಿದ್ದರು. ಕಳೆದ ನಾಲ್ಕೈದು ದಿನದಿಂದ ಮಳೆ ಬಿಡುವು ನೀಡಿದ್ದ ಪರಿಣಾಮ ಬೆಳೆಗಾರರು ನಿಟ್ಟುಸಿರು ಬಿಟ್ಟು ಬೆಳೆಯನ್ನ ಒಣಗಿಸೋದಕ್ಕೆ ಮುಂದಾಗಿದ್ದರು. ಆದರೀಗ, ಮತ್ತೆ ಏಕಾಏಕಿ ಆರಂಭವಾದ ಮಳೆ ಧಾರಾಕಾರವಾಗಿ ಸುರಿದ ಪರಿಣಾಮ ಅಂಗಳದಲ್ಲಿದ್ದ ಬೆಳೆ ಮೇಲೆ ನೀರು ನುಗ್ಗಿದ್ದು ಬೆಳೆಗಾರರು ಮತ್ತೆ ಆತಂಕಕ್ಕೀಡಾಗಿದ್ದಾರೆ. ಈ ಬಾರಿ ಕಾಫಿಗೆ ಉತ್ತಮ ಬೆಲೆ ಇದೆ. ಆದರೆ, ಬೆಳೆ ಇಲ್ಲ. 50 ಕೆ.ಜಿ. ಕಾಫಿ ಮೂಟೆಗೆ 15 ರಿಂದ 17 ಸಾವಿರದವೆಗೆ ಇದೆ. ಆದರೆ, ಈ ವರ್ಷ ಬೆಳೆಯೇ ಇಲ್ಲ. ಆರಂಭದಲ್ಲಿ ಉತ್ತಮವಾಗಿದ್ದ ಫಸಲು ಮಳೆ, ಹವಾಮಾನ ವೈಪರಿತ್ಯದಿಂದ ಗಿಡದಲ್ಲಿ ಇದ್ದದ್ದಕ್ಕಿಂತ ಜಾಸ್ತಿ ಮಣ್ಣಲ್ಲಿ ಕೊಳೆದು ಗೊಬ್ಬರವಾಗಿದ್ದೇ ಹೆಚ್ಚು. ಇರೋ ಬೆಳೆಯನ್ನ ಬೆಳೆಗಾರರು ಹೋರಾಡಿ ಉಳಿಸಿಕೊಳ್ಳುತ್ತಿದ್ದಾರೆ. ಈಗ ಮತ್ತೆ ಮಳೆ ಆರಂಭವಾಗಿದ್ದು ಇರೋ ಬೆಳೆಗೂ ಮಳೆರಾಯ ಮಗ್ಗಲ ಮುಳ್ಳಾಗುತ್ತಾನಾ ಎಂದು ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು