10:34 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್

31/05/2022, 14:00

ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು.



ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಳೆ ನೀರು ಕೊಯ್ಲು ಅವಶ್ಯ ಎಂದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಂಗು ಗುಂಡಿಗಳ ನಿರ್ಮಾಣ ಸಾಮಾಜಿಕ ಜವಾಬ್ದಾರಿಯಾಗಿದ್ದು, ಯುವ ಪೀಳಿಗೆ ನೀರಿನ ಪ್ರಾಮುಖ್ಯತೆ ಅರಿಯುವುದು ಅಗತ್ಯ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ ಲ್. ಗಂಗಾಧರ್ ಮಾತನಾಡಿ ಮಳೆ ಕೊಯ್ಲು ಮಾಡುದರಿಂದ ನೀರಿನ ಉಳಿತಾಯ ಮಾತ್ರವಲ್ಲ, ಅಂತರ್ಜಾಲ ಮಟ್ಟ ಹಾಗೂ ನೀರಿನ ಒರತೆ ಹೆಚ್ಚುತ್ತದೆ.ಎಂದು ಹೇಳಿದರು.

ಉದಯವಾಣಿ ಮಂಗಳೂರು ವಿಭಾಗದ ಜಾಹೀರಾತು ಮುಖ್ಯಸ್ಥ ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.

ಮಂಗಳೂರು ಸುದ್ಧಿ ವಿಭಾಗದ ಮುಖ್ಯಸ್ಥ ವೇಣು ವಿನೋದ್, ವರದಿಗಾರರಾದ ದಿನೇಶ್ ಇರಾ, ಸಂತೋಷ್ ಕುಮಾರ್, ಕೇಶವ ಕುಂದರ್, ನವೀನ್ ಭಟ್ ಇಲಂತಿಳ,ಛಾಯಾ ಗ್ರಾಹಕ ಸತೀಶ್ ಇರಾ ಪಾಲ್ಗೊಂಡಿದ್ದರು.



ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 100 ಸ್ವಯಂ ಸೇವಕರು ಭಾಗವಹಿಸಿ, ಮಳೆ ನೀರಿನ ಕೊಯ್ಲು ಅಗತ್ಯತೆಯ ಬಗ್ಗೆ ಅರಿತು ಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು