11:49 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್

31/05/2022, 14:00

ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು.



ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಳೆ ನೀರು ಕೊಯ್ಲು ಅವಶ್ಯ ಎಂದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಂಗು ಗುಂಡಿಗಳ ನಿರ್ಮಾಣ ಸಾಮಾಜಿಕ ಜವಾಬ್ದಾರಿಯಾಗಿದ್ದು, ಯುವ ಪೀಳಿಗೆ ನೀರಿನ ಪ್ರಾಮುಖ್ಯತೆ ಅರಿಯುವುದು ಅಗತ್ಯ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ ಲ್. ಗಂಗಾಧರ್ ಮಾತನಾಡಿ ಮಳೆ ಕೊಯ್ಲು ಮಾಡುದರಿಂದ ನೀರಿನ ಉಳಿತಾಯ ಮಾತ್ರವಲ್ಲ, ಅಂತರ್ಜಾಲ ಮಟ್ಟ ಹಾಗೂ ನೀರಿನ ಒರತೆ ಹೆಚ್ಚುತ್ತದೆ.ಎಂದು ಹೇಳಿದರು.

ಉದಯವಾಣಿ ಮಂಗಳೂರು ವಿಭಾಗದ ಜಾಹೀರಾತು ಮುಖ್ಯಸ್ಥ ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.

ಮಂಗಳೂರು ಸುದ್ಧಿ ವಿಭಾಗದ ಮುಖ್ಯಸ್ಥ ವೇಣು ವಿನೋದ್, ವರದಿಗಾರರಾದ ದಿನೇಶ್ ಇರಾ, ಸಂತೋಷ್ ಕುಮಾರ್, ಕೇಶವ ಕುಂದರ್, ನವೀನ್ ಭಟ್ ಇಲಂತಿಳ,ಛಾಯಾ ಗ್ರಾಹಕ ಸತೀಶ್ ಇರಾ ಪಾಲ್ಗೊಂಡಿದ್ದರು.



ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 100 ಸ್ವಯಂ ಸೇವಕರು ಭಾಗವಹಿಸಿ, ಮಳೆ ನೀರಿನ ಕೊಯ್ಲು ಅಗತ್ಯತೆಯ ಬಗ್ಗೆ ಅರಿತು ಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು