12:57 PM Wednesday27 - May 2026
ಬ್ರೇಕಿಂಗ್ ನ್ಯೂಸ್
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್

31/05/2022, 14:00

ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು.



ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಳೆ ನೀರು ಕೊಯ್ಲು ಅವಶ್ಯ ಎಂದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಂಗು ಗುಂಡಿಗಳ ನಿರ್ಮಾಣ ಸಾಮಾಜಿಕ ಜವಾಬ್ದಾರಿಯಾಗಿದ್ದು, ಯುವ ಪೀಳಿಗೆ ನೀರಿನ ಪ್ರಾಮುಖ್ಯತೆ ಅರಿಯುವುದು ಅಗತ್ಯ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ ಲ್. ಗಂಗಾಧರ್ ಮಾತನಾಡಿ ಮಳೆ ಕೊಯ್ಲು ಮಾಡುದರಿಂದ ನೀರಿನ ಉಳಿತಾಯ ಮಾತ್ರವಲ್ಲ, ಅಂತರ್ಜಾಲ ಮಟ್ಟ ಹಾಗೂ ನೀರಿನ ಒರತೆ ಹೆಚ್ಚುತ್ತದೆ.ಎಂದು ಹೇಳಿದರು.

ಉದಯವಾಣಿ ಮಂಗಳೂರು ವಿಭಾಗದ ಜಾಹೀರಾತು ಮುಖ್ಯಸ್ಥ ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.

ಮಂಗಳೂರು ಸುದ್ಧಿ ವಿಭಾಗದ ಮುಖ್ಯಸ್ಥ ವೇಣು ವಿನೋದ್, ವರದಿಗಾರರಾದ ದಿನೇಶ್ ಇರಾ, ಸಂತೋಷ್ ಕುಮಾರ್, ಕೇಶವ ಕುಂದರ್, ನವೀನ್ ಭಟ್ ಇಲಂತಿಳ,ಛಾಯಾ ಗ್ರಾಹಕ ಸತೀಶ್ ಇರಾ ಪಾಲ್ಗೊಂಡಿದ್ದರು.



ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 100 ಸ್ವಯಂ ಸೇವಕರು ಭಾಗವಹಿಸಿ, ಮಳೆ ನೀರಿನ ಕೊಯ್ಲು ಅಗತ್ಯತೆಯ ಬಗ್ಗೆ ಅರಿತು ಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು