11:48 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಳೆಯಿಂದಾಗಿ ಹಾನಿ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೂಚನೆ 

22/11/2021, 22:30

ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹಿರಿಯೂರು ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಸತತವಾಗಿ ಮಳೆ ಬರುತ್ತಿರುವ ಕಾರಣ ತಾಲೂಕಿನ ಸಂಬಂಧಪಟ್ಟ ಅಧಿಕಾರಿಗಳಾದ ತಹಶೀಲ್ದಾರರು, ಪೋಲೀಸ್ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿ ವರ್ಗದವರು ತಮ್ಮ ತಮ್ಮ ಮೊಬೈಲ್ ಗಳನ್ನು ಆನ್ ಮಾಡಿ ಇಟ್ಟುಕೊಳ್ಳಬೇಕು ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ.

ಸಾರ್ವಜನಿಕರು ಮಳೆಯಿಂದಾಗಿ ಸಮಸ್ಯೆಗಳಿಗೆ ಸಿಲುಕಿದ ಸಂದರ್ಭದಲ್ಲಿ ತಮಗೆ ಪೋನ್ ಮಾಡಿದರೆ ಅವರ ಸಮಸ್ಯೆಗಳಿಗೆ ತಕ್ಷಣವೇ ತಾಲ್ಲೂಕು ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸಬೇಕಾಗಿದೆ ಎಂಬುದಾಗಿ ಶಾಸಕರು ತಿಳಿಸಿದ್ದಾರೆ.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಓಗಳು ನಗರಸಭೆ ಕಮೀಷನರ್ ಹಾಗೂ ಸಿಬ್ಬಂದಿ, ಪೋಲೀಸ್ ಇಲಾಖೆ ಡಿ.ವೈ.ಎಸ್.ಪಿ ಹಾಗೂ ಅಧೀನ ಅಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಸ್ಥಳದಲ್ಲೇ ಇರುವಂತೆ ಸೂಚನೆ ನೀಡಬೇಕು ಎಂಬುದಾಗಿ ಅವರು ಹೇಳಿದ್ದಾರೆ.

ಸಾರ್ವಜನಿಕರು ಯಾರಾದರೂ ಫೋನ್ ಮಾಡಿದರೆ, ನಾವು ಮೀಟಿಂಗ್ ನಲ್ಲಿ ಇದ್ದೀವಿ ಎಂಬುದಾಗಿ ಸಬೂಬು ಹೇಳದೆ ಸಾರ್ವಜನಿಕರ ಕರೆಗಳನ್ನು ಅಧಿಕಾರಿಗಳು ಸ್ವೀಕರಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರಲ್ಲದೆ.

ಸಾರ್ವಜನಿಕರು ಸತತ ಮಳೆ ಸುರಿಯುತ್ತಿರುವುದರಿಂದ ಹಳೆಯ ಮನೆಗಳ ಗೋಡೆ ಕುಸಿದು ಈಗಾಗಲೇ ಸಾವು-ನೋವು ಸಂಭವಿಸಿರುವುದರಿಂದ ಹಳೆಯ ಮನೆಗಳಲ್ಲಿ ಯಾರು ವಾಸಮಾಡುತ್ತಿದ್ದೀರಿ, ಅವರು ದಯಮಾಡಿ ಸುರಕ್ಷಿತ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದಾಗಿ ಸಹ ತಿಳಿಸಿದ್ದಾರೆ

ತಾಲ್ಲೂಕಿನಲ್ಲಿ ಕಳೆದ 3 ದಿನಗಳಿಂದ ಸತತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡದೆ ಮನೆಗಳಲ್ಲೇ ಸುರಕ್ಷಿತವಾಗಿರಬೇಕು. ಅಲ್ಲದೆ ಗ್ರಾಮಗಳ ಜನ ಹೊಲ, ಮನೆ, ಗದ್ದೆ, ತೋಟಗಳಿಗೆ ಓಡಾಡುವಾಗ ಎಚ್ಚರಿಕೆಯಿಂದ ಓಡಾಡಬೇಕು, ಹಳ್ಳ-ಕೊಳ್ಳಗಳ ಬಳಿ ಹೋಗಬಾರದು ಈ ಬಗ್ಗೆ ಅತ್ಯಂತ ಮುನ್ನೆಚ್ಚರಿಕೆ ವಹಿಸಿಬೇಕು ಎಂಬುದಾಗಿ ಹೇಳಿದ್ದಾರೆ.

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪಿ.ಡಿ.ಓ ಗಳು ಯಾವುದೇ ಘಟನೆ ಸಂಭವಿಸಿದರೆ ತಕ್ಷಣವೇ ತಾಲ್ಲೂಕು ಆಡಳಿತಕ್ಕೆ ತಿಳಿಸಬೇಕು, ಈ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಹಾಗೂ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂಬುದಾಗಿ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಶಾಸಕರಾದ ಪೂರ್ಣಿಮಾಶ್ರೀನಿವಾಸ್ ತಾಲ್ಲೂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು