3:08 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಲೆನಾಡ ಕಾಶ್ಮೀರ ಬಸರೀಕಟ್ಟೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಪನ್ನ: ಭುವನೇಶ್ವರಿ ದೇವಿಯ ವೈಭವದ ಮೆರವಣಿಗೆ

28/11/2023, 19:39

ಶಶಿ ಬೆತ್ತದಕೊಳಲು ಕೊಪ್ಪ

info.reporterarnataka@gmail.com

ಕೊಪ್ಪ(reporterkarnataka.com): ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ “ಗೆಳೆಯರ ಬಳಗ” ಬಸರೀಕಟ್ಟೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಸೋಮವಾರದಂದು ಆಚರಿಸಲಾಯಿತು.
ಬಸರೀಕಟ್ಟೆ ಅಂದ್ರೆನೆ ಚಂದದ ಊರು ಮಲೆನಾಡ ಕಾಶ್ಮೀರ ಅಂತಾನೆ ಹೇಳ್ತಾರೆ ಪ್ರವಾಸಿಗರು. ಭೂಲೋಕದ ಸ್ವರ್ಗ ಅಂತಾನೂ ಕರೆಸಿಕೊಳ್ಳುವ ಬಸರೀಕಟ್ಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಅಂದ್ರೆ ಕೇಳ್ಬೇಕ?
ಅಬ್ಬಬ್ಬಾ ನೋಡೋಕೆ ಎರಡು ಕಣ್ಣುಗಳು ಸಾಲದಾಯ್ತು.
ಕನ್ನಡ ಮನಸ್ಸುಗಳನ್ನು ಒಂದೆಡೆ ನೋಡಿ ಕನ್ನಡಾಂಬೆ ಕೂಡ ಒಮ್ಮೆ ಖುಷಿ ಪಟ್ಟಂತೆ ಅನ್ನಿಸಿ ಬಿಡ್ತು..


ಬೆಳಗ್ಗೆ ನಡೆದ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕನ್ನಡ ತಾಯಿಗೆ ಜೈಕಾರ ಹಾಕಿದರು. ಮೆರವಣಿಗೆಯಲ್ಲಿ ವಿವಿಧ ವೇಷಗಳ ನೃತ್ಯವೂ ಇತ್ತು. ಈ ಭಾರೀಯ ಭುವನೇಶ್ವರಿ ದೇವಿಯ ಸ್ತಬ್ಧಚಿತ್ರವಂತು ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ನಂತರ ಸಭಾ ಕಾರ್ಯಕ್ರಮವೂ ಪ್ರಧಾನ ಸಂಚಾಲಕ ವಿಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಊರಿನ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಭಾರೀ ಊರಿಗೆ ಕೀರ್ತಿ ತಂದ ಮಕ್ಕಳನ್ನು ವಿಶೇಷವಾಗಿ ಸನ್ಮಾನಿಸಿ ಅವರ ಸಾಧನೆಯನ್ನು ಕೊಂಡಾಡಲಾಯಿತು..
ಬಸರೀಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಸ್ಸಾಂ ಮೂಲದ ವಿದ್ಯಾರ್ಥಿನಿ ಕನ್ನಡ ಬಾವುಟ ಮತ್ತು ದೇಶದ ಬಾವುಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರಳಾದಳು.

ಇತ್ತೀಚಿನ ಸುದ್ದಿ

ಜಾಹೀರಾತು