7:18 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60…

ಇತ್ತೀಚಿನ ಸುದ್ದಿ

ಮಲೆನಾಡ ಕಾಶ್ಮೀರ ಬಸರೀಕಟ್ಟೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಪನ್ನ: ಭುವನೇಶ್ವರಿ ದೇವಿಯ ವೈಭವದ ಮೆರವಣಿಗೆ

28/11/2023, 19:39

ಶಶಿ ಬೆತ್ತದಕೊಳಲು ಕೊಪ್ಪ

info.reporterarnataka@gmail.com

ಕೊಪ್ಪ(reporterkarnataka.com): ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ “ಗೆಳೆಯರ ಬಳಗ” ಬಸರೀಕಟ್ಟೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಸೋಮವಾರದಂದು ಆಚರಿಸಲಾಯಿತು.
ಬಸರೀಕಟ್ಟೆ ಅಂದ್ರೆನೆ ಚಂದದ ಊರು ಮಲೆನಾಡ ಕಾಶ್ಮೀರ ಅಂತಾನೆ ಹೇಳ್ತಾರೆ ಪ್ರವಾಸಿಗರು. ಭೂಲೋಕದ ಸ್ವರ್ಗ ಅಂತಾನೂ ಕರೆಸಿಕೊಳ್ಳುವ ಬಸರೀಕಟ್ಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಅಂದ್ರೆ ಕೇಳ್ಬೇಕ?
ಅಬ್ಬಬ್ಬಾ ನೋಡೋಕೆ ಎರಡು ಕಣ್ಣುಗಳು ಸಾಲದಾಯ್ತು.
ಕನ್ನಡ ಮನಸ್ಸುಗಳನ್ನು ಒಂದೆಡೆ ನೋಡಿ ಕನ್ನಡಾಂಬೆ ಕೂಡ ಒಮ್ಮೆ ಖುಷಿ ಪಟ್ಟಂತೆ ಅನ್ನಿಸಿ ಬಿಡ್ತು..


ಬೆಳಗ್ಗೆ ನಡೆದ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕನ್ನಡ ತಾಯಿಗೆ ಜೈಕಾರ ಹಾಕಿದರು. ಮೆರವಣಿಗೆಯಲ್ಲಿ ವಿವಿಧ ವೇಷಗಳ ನೃತ್ಯವೂ ಇತ್ತು. ಈ ಭಾರೀಯ ಭುವನೇಶ್ವರಿ ದೇವಿಯ ಸ್ತಬ್ಧಚಿತ್ರವಂತು ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ನಂತರ ಸಭಾ ಕಾರ್ಯಕ್ರಮವೂ ಪ್ರಧಾನ ಸಂಚಾಲಕ ವಿಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಊರಿನ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಭಾರೀ ಊರಿಗೆ ಕೀರ್ತಿ ತಂದ ಮಕ್ಕಳನ್ನು ವಿಶೇಷವಾಗಿ ಸನ್ಮಾನಿಸಿ ಅವರ ಸಾಧನೆಯನ್ನು ಕೊಂಡಾಡಲಾಯಿತು..
ಬಸರೀಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಸ್ಸಾಂ ಮೂಲದ ವಿದ್ಯಾರ್ಥಿನಿ ಕನ್ನಡ ಬಾವುಟ ಮತ್ತು ದೇಶದ ಬಾವುಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರಳಾದಳು.

ಇತ್ತೀಚಿನ ಸುದ್ದಿ

ಜಾಹೀರಾತು