9:41 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮಳೆಯಾಗಿ ತುಂಗಭದ್ರಾ ಜಲಾಶಯ ಮತ್ತೆ ತುಂಬಲಿದೆ; ರೈತರಿಗೆ ಯಾವುದೇ ತೊಂದರೆಯಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ

13/08/2024, 16:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಹವಾಮಾನ ಮುನ್ಸೂಚನೆಯಂತೆ ಮತ್ತೆ ಮಳೆಯಾಗಿ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುನಿರಾಬಾದ್ ಜಲಾಶಯದ ಕೊಚ್ಚಿ ಹೋದ ಗೇಟ್
ಸ್ಥಳ ಮಂಗಳವಾರ ಪರಿಶೀಲಿಸಿಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ಅಡಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ದುರಸ್ತಿಗಾಗಿ 50ರಿಂದ 60 ಟಿಎಂಸಿ ಅಡಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆಯಿದೆ. ದುರಸ್ತಿ ಕಾರ್ಯವು ಆಂದ್ರದ ಪರಿಣಿತ ತಜ್ಞ ಕನ್ನಯ್ಯ ನಾಯ್ಡು  ಅವರ ಮಾರ್ಗದರ್ಶದಲ್ಲಿ ನಡೆಯುತ್ತಿದೆ. ಇನ್ನೂ ನಾಲ್ಕು ದಿನದಳಲ್ಲಿ ಗೇಟ್ ಕೂರಿಸುವ ಕಾರ್ಯನಡೆಯುತ್ತದೆ ಎಂದು ತಿಳಿಸಿದರು.
ಹವಾಮಾನ ಮುನ್ಸೂಚನೆಯಂತೆ ಆ. 15ರ ನಂತರ ಪುನ: ಮಳೆ ಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ, ನಾನೇ ಬಂದು ಜಲಾಶಯಕ್ಕೆ ಬಾಗಿನ ಅರ್ಪಿಸುತ್ತೆನೆ ಎಂದರು.
*ಯಾರ ಮೇಲೂ ಗೂಬೆ ಕೂರಿಸುವುದಿಲ್ಲ:*
ತುಂಗಭದ್ರಾ ಮಂಡಳಿ ಅಧ್ಯಕ್ಷ ಕೇಂದ್ರ ಸರ್ಕಾರದಿಂದ ನೇಮಕವಾಗುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿದೆ. ಅವರು ಏನು ಮಾಡಿದ್ದಾರೆ. ಜಲಾಶಯ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಯಾರ ಮೇಲೂ ಗೂಬೆ ಕೂರಿಸುವುದಿಲ್ಲ. ರೈತರ ಪರ ಇದ್ದೇವೆ‌. ರೈತರನ್ನು, ನೀರನ್ನು ಹಾಗೂ ಜಲಾಶಯವನ್ನು ಉಳಿಸುತ್ತೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್, ಬೋಸರಾಜು, ಶಿವರಾಜ ತಂಗಡಗಿ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಎಂಎಲ್ಸಿ ಹಂಪನಗೌಡ ಬಾದರ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು