9:54 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಮಲ್ಲಿಕಟ್ಟೆ: ಎಸ್ ಸಿಐ ವತಿಯಿಂದ 1 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

09/01/2022, 17:02

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಾರ್ವಜನಿಕರ ಉಪಯೋಗಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಗರದ ಕದ್ರಿ ಮಲ್ಲಿಕಟ್ಟೆಯ ರಿಕ್ಷಾ ನಿಲ್ದಾಣದಲ್ಲಿ ಇತ್ತೀಚೆಗೆ ಉದ್ಘಾಟಿಸಲಾಯಿತು. ಅಂತಾರಾಷ್ಟ್ರೀಯ ಅಧ್ಯಕ್ಷ ರ ಕನಸಿನ ಸಮುದಾಯ ಅಭಿವೃದ್ಧಿ ಯೋಜನೆ ‘ ಜಲಧಾರ 2021-22’  ಕಾರ್ಯಕ್ರಮದಡಿ ಸುಮಾರು 1 ಲಕ್ಷ ರೂ. ವೆಚ್ಚದ ಶುದ್ಧ ನೀರಿನ ಘಟಕವನ್ನು ದಿ. ಕೆ.ಪಿ. ಭಾಸ್ಕರ್ ಅವರ ಸ್ಮರಣಾರ್ಥ ಅವರ ಪತ್ನಿ ಮರೋಳಿ ವಜ್ರಾಕ್ಷಿ ಭಾಸ್ಕರ್  ಅವರು ಕೊಡುಗೆಯಾಗಿ ನೀಡಿದ್ದು ಸೀನಿಯರ್ ಚೇಂಬರ್ ನ ಅಂತಾರಾಷ್ಟ್ರೀಯ ಅಧ್ಯಕ್ಷರಾದ  ಡಾ. ಅರವಿಂದ  ರಾವ್ ಕೇದಿಗೆಯವರು ಉದ್ಘಾಟಿಸಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರು  ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ಸಮಾಜಮುಖಿ ಕೆಲಸಗಳನ್ನು  ಮಾಡುತ್ತಿರುವುದು ಶ್ಲಾಘನೀಯ ಹಾಗೂ ಇನ್ನೂ ಹೆಚ್ಚಿನ ಕಾರ್ಯಕ್ರಮಗಳು ಜರಗುವಂತಾಗಲಿ ಎಂದು ಹಾರೈಸಿದರು. ಉಪ ಮೇಯರ್ ಸುಮಂಗಲಾ ಸುಧೀರ್, ಸ್ಥಳೀಯ ಕಾರ್ಪೊರೇಟರ್ ಗಳಾದ ಮನೋಹರ್ ಶೆಟ್ಟಿ, ಕಾವ್ಯ ನಟರಾಜ್ ಆಳ್ವ, ನಾಮನಿರ್ದೇಶಿತ ಸದಸ್ಯ ಭಾಸ್ಕರ್ ಚಂದ್ರ ಶೆಟ್ಟಿ, ಸಮಾಜ ಸೇವಕರಾದ ವಿಜಯ ಭಂಡಾರಿ, ಆಟೋರಿಕ್ಷಾ ಸಂಘದ ಅಧ್ಯಕ್ಷ ಜನಾರ್ದನ ಶಕ್ತಿನಗರ, ನಿವೇದಿತಾ ಶೆಟ್ಟಿ, ಗಾಯತ್ರಿ ಅರವಿಂದ ರಾವ್, ಸುಂದರ್ ರಾಮ್ ಟ್ರಸ್ಟ್ ಅಧ್ಯಕ್ಷ ಕರುಣಾಕರ ಶೆಟ್ಟಿ, ಸೀನಿಯರ್ ಚೇಂಬರಿನ ಪ್ರಶಾಂತ್ ಸುವರ್ಣ, ಫ್ಲೇವಿ ಗ್ಲಾಡಿಸ್ ಡಿ’ಮೆಲ್ಲೋ, ಸದಾನಂದ ಶೆಟ್ಟಿ, ದಿವ್ಯ ರೈ,ಮಾಲತಿ ಶೆಟ್ಟಿ, ತಾರಾಕ್ಷಿ, ಪೂರ್ಣಿಮ ರತನ್, ನಿರ್ಮಲ ಪ್ರಮೋದ್, ಅರ್ಚನ ಬಾಲಾಜಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೊಡುಗೆ ನೀಡಿದ ವಜ್ರಾಕ್ಷಿ ಭಾಸ್ಕರ್ ಅವರನ್ನು ಮೇಯರ್ ಅವರು ಶಾಲು ಹೊದಿಸಿ ಫಲ-ಪುಷ್ಪ ನೀಡಿ ಸನ್ಮಾನಿಸಿದರು. 


ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಅಧ್ಯಕ್ಷರಾದ ಜಿ.ಕೆ.ಹರಿಪ್ರಸಾದ್ ಕಾರಮೊಗರಗುತ್ತು ಅಧ್ಯಕ್ಷತೆ ವಹಿಸಿದ್ದು, ಶಾಲಿನಿ ಪ್ರಶಾಂತ್ ಸುವರ್ಣ ಸ್ವಾಗತಿಸಿದರು. ಲತಾ ಕಲ್ಲಡ್ಕ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು